ಇಂದಿಗೆ ನಮ್ಮ ಸರ್ಕಾರದ ಶಕ್ತಿ ಯೋಜನೆಯಡಿ ನಾಡಿನ ಹೆಣ್ಣುಮಕ್ಕಳು 100 ಕೋಟಿ ಉಚಿತ ಪ್ರಯಾಣ ಬೆಳೆಸಿದ್ದಾರೆ. ಶಿಕ್ಷಣ, ಉದ್ಯೋಗ ಮುಂತಾದ ಉದ್ದೇಶಗಳಿಗಾಗಿ ನಿತ್ಯ ಪ್ರಯಾಣ ಬೆಳೆಸುವ ಹೆಣ್ಣುಮಕ್ಕಳಿಗೆ ಈ ಯೋಜನೆ ವರದಾನವಾಗಿದೆ ಎಂದು ಮುಖ್ಯಮಂತ್ರಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.
ಯೋಜನೆ ಜಾರಿಯಾದ ನಂತರದ ಐದು ತಿಂಗಳ ಅವಧಿಯಲ್ಲಿ ಉಜ್ವಲ ಭವಿಷ್ಯದ ಕನಸು ಕಟ್ಟಿಕೊಂಡು ಶಾಲಾ ಕಾಲೇಜಿಗೆ ಹೋಗುವ ಹೆಣ್ಣುಮಕ್ಕಳು, ಕುಟುಂಬ ನಿರ್ವಹಣೆಗಾಗಿ ದುಡಿಮೆಗೆ ತೆರಳುವ ಮಹಿಳೆಯರು, ತನ್ನ ಮತ್ತು ತನ್ನವರ ವೈದ್ಯಕೀಯ ಚಿಕಿತ್ಸೆಯ ಉದ್ದೇಶಕ್ಕಾಗಿ ದೂರದ ಊರಿಗೆ ಪ್ರಯಾಣ ಬೆಳೆಸುವ ತಾಯಂದಿರ ಮುಖದಲ್ಲಿ ಮಂದಹಾಸ ಕಂಡಿದ್ದೇನೆ. ಯೋಜನೆಯೊಂದು ನಮ್ಮ ನಿರೀಕ್ಷೆಗೂ ಮೀರಿ ಅರ್ಹರನ್ನು ತಲುಪಿದಾಗ ಮೂಡುವ ಸಾರ್ಥಕ್ಯದ ಭಾವ ಈಗ ನನ್ನದಾಗಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.