Thursday, September 19, 2024

ಪ್ರಾಯೋಗಿಕ ಆವೃತ್ತಿ

101 ಯೂನಿಟ್ ರಕ್ತ ನೀಡಿ ಸಾಮಾಜಿಕ ಕಳಕಳಿ ಮೆರೆದ ‌ವೈದ್ಯಕೀಯ ಹಾಗೂ ಕೃಷಿ ವಿಜ್ಞಾನ ವಿದ್ಯಾರ್ಥಿಗಳು

ಮಂಡ್ಯ ವೈದ್ಯಕೀಯ ಕಾಲೇಜಿನ ರಾಷ್ಟೀಯ ಸೇವಾ‌ ಯೋಜನಾ ವಿದ್ಯಾರ್ಥಿಗಳು ಆರೋಗ್ಯ ಸೇವೆ ನೀಡುವುದರ ಜೊತೆಗೆ ಆಸ್ಪತ್ರೆಯಲ್ಲಿ ದಾಖಲಾಗುವ ಬಡ ರೋಗಿಗಳಿಗೆ ಬೇಕಿರುವ ರಕ್ತವನ್ನು ತಾವೇ ನೀಡುವುದರ ಮೂಲಕ ಸಾಮಾಜಿಕ ಕಳಕಳಿ ಮೆರೆದಿದ್ದಾರೆ.

ಮಿಮ್ಸ್ ನಲ್ಲಿ ನಡೆದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು 61 ಯೂನಿಟ್ ಹಾಗೂ ವಿ.ಸಿ.ಫಾರಂನ ಕೃಷಿ ವಿಜ್ಞಾನ ವಿದ್ಯಾರ್ಥಿಗಳು 37 ಯೂನಿಟ್ ರಕ್ತ ನೀಡಿದರು. ಮಿಮ್ಸ್ ನಲ್ಲಿ ತುರ್ತು ಚಿಕಿತ್ಸೆ ಹಾಗೂ ಇನ್ನಿತರ ಸಂದರ್ಭದಲ್ಲಿ ಬಳಸಲು ರಕ್ತ ಬ್ಯಾಂಕ್ ನಲ್ಲಿ ಸಂಗ್ರಹಿಸಲಾಗಿದೆ.

ಕಾರ್ಯಕ್ರಮದಲ್ಲಿ ಮಿಮ್ಸ್ ನಿರ್ದೇಶಕ ಡಾ ಬಿ.ಜೆ ಮಹೇಂದ್ರ, ಪ್ರಾಂಶುಪಾಲ ಬಿ.ಎಸ್. ತಮ್ಮಣ್ಣ, ರೋಗ ವಿಜ್ಞಾನ ವಿಭಾಗದ ಎಂ.ಎಸ್. ಸಿದ್ದೇಗೌಡ, ರಕ್ತ ನಿಧಿ ಕೇಂದ್ರದ ಅಧಿಕಾರಿ ಡಾ: ಮುರಳಿಧರ್ ಭಟ್, ಎನ್.ಎಸ್.ಎಸ್ ಸಮನ್ವಯಾಧಿಕಾರಿ ಡಾ.ಚಂದನ್ ಹಾಗೂ ವಿದ್ಯಾರ್ಥಿ ಸಂಘದ ಅಧ್ಯಕ್ಷ ಡಾ.ವೈಭವ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!