ನಾಗಮಂಗಲ ತಾಲ್ಲೂಕಿನ ಬಂಕಾಪುರ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮಾಡಲಾಗುವುದು ಎಂದು ಶಾಸಕ ಸುರೇಶ್ ಗೌಡ ಹೇಳಿದರು.
ಇಂದು ಬಂಕಾಪುರದಲ್ಲಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ವತಿಯಿಂದ ಈ ಹಣ ಬಿಡುಗಡೆಯಾಗಿದ್ದು, ಇದರಲ್ಲಿ ಉತ್ತಮ ಕಾಂಕ್ರೀಟ್ ರಸ್ತೆ ಹಾಗೂ ಚರಂಡಿ ನಿರ್ಮಾಣ ಮಾಡಲಾಗುವುದು ಎಂದರು.
ಜೆಡಿಎಸ್ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್, ಪುರಸಭೆ ಸದಸ್ಯ ಯೋಗೇಶ್, ಗಾ.ಪಂ.ಸದಸ್ಯ ಅಂಬರೀಶ್, ಜೆಡಿಎಸ್ ಮುಖಂಡ ಜಗದೀಶ್ ಮತ್ತಿತರರಿದ್ದರು.