ಮಧ್ಯಪ್ರದೇಶದ ಪನ್ನಾ ಜಿಲ್ಲೆಗೆ ಸೇರಿದ 28 ಮಂದಿ ಯಾತ್ರಾರ್ಥಿಗಳು ಯಮುನೋತ್ರಿಗೆ ತೆರುಳುತ್ತಿದ್ದ ಬಸ್ ಹಳ್ಳಕ್ಕೆ ಬಿದ್ದು ಸುಮಾರು 26 ಮಂದಿ ಸಾವನ್ನಪ್ಪಿದ್ದಾರೆ.
ಉತ್ತರಖಂಡದ ಉತ್ತರಕಾಶಿ ಜಿಲ್ಲೆಯ ಬಳಿ ಸುಮಾರು 250 ಮೀಟರ್ ಆಳದ ಹಳ್ಳಕ್ಕೆ ಬಸ್ ಉರುಳಿದ್ದು, ಬಸ್ ನ ಚಾಲಕ ಮತ್ತು ಸಹಾಯಕ ಸೇರಿದಂತೆ 26 ಮಂದಿ ಸಾವನ್ನಪ್ಪಿದ್ದಾರೆ ಎಂದು ರಕ್ಷಣಾ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಕಂಡ ಮುಖ್ಯಮಂತ್ರಿ ಪುಷ್ಕರ ಸಿಂಗ ಧಾಮಿ ಮೃತಪಟ್ಟ ಪ್ರಯಾಣಿಕರಿಗೆ ತಲಾ ಒಂದುಲಕ್ಷ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ಘೋಷಿಸಿದ್ದಾರೆ
ಮೃತ ಪಟ್ಟ ಶವಗಳನ್ನು ಸಂಬಂಧಪಟ್ಟವರಿಗೆ ತಲುಪಿಸುತ್ತೇವೆ ಎಂದು ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.