ಮಂಡ್ಯ ನಗರದ ಗುತ್ತಲು ಬಡಾವಣೆಯ ಸಾಹುಕಾರ್ ಚನ್ನಯ್ಯ ಬಡಾವಣೆಯಲ್ಲಿ ಮಳೆಯಿಂದ ಗೋಡೆ ಕುಸಿದು ಮೃತಪಟ್ಟ ವೃದ್ಧೆ ಪಾರ್ವತಿ ಬಾಯಿ ಅವರ ಕುಟುಂಬಕ್ಕೆ 5 ಲಕ್ಷ ರೂ.ಗಳ ಪರಿಹಾರ ನೀಡಲಾಯಿತು.
ಇಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ,ರೇಷ್ಮೆ ಮತ್ತು ಕ್ರೀಡಾ ಸಚಿವ ನಾರಾಯಣಗೌಡ,ಶಾಸಕ ಎಂ.ಶ್ರೀನಿವಾಸ್ ಮೃತರಾದ ಪಾರ್ವತಿ ಬಾಯಿ ಅವರ ಮನೆಗೆ ತೆರಳಿ ಅವರ ಮಗಳಿಗೆ ಸಾಂತ್ವನ ಹೇಳಿ ಎನ್.ಡಿ.ಆರ್.ಎಫ್ ನಿಂದ ನೀಡಲಾಗುವ 5 ಲಕ್ಷ ರೂ.ಗಳ ಪರಿಹಾರ ಚೆಕ್ ವಿತರಿಸಿದರು.
ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಸ್. ಅಶ್ವತಿ, ಉಪವಿಭಾಗಾಧಿಕಾರಿ ಐಶ್ವರ್ಯ ಹಾಗೂ ಮಂಡ್ಯ ತಹಶೀಲ್ದಾರ್ ಕುಂಇ ಅಹಮದ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.