ಮಂಡ್ಯ ತಾಲ್ಲೂಕು ಸುಂಡಹಳ್ಳಿ ಗ್ರಾಮದ ಬಳಿಯಿರುವ ಕಾವೇರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2023- 24ನೇ ಇಂಜಿನಿಯರಿಂಗ್ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡುವ 7ನೇ ಘಟಿಕೋತ್ಸವ ಆ.24ರಂದು ಬೆಳಿಗ್ಗೆ 10 ಗಂಟೆಗೆ ಕಾಲೇಜಿನ ಕಾವೇರಿ ಸಭಾಂಗಣದಲ್ಲಿ ನಡೆಯಲಿದೆ ಎಂದು ಕಾವೇರಿ ತಾಂತ್ರಿಕ ಮಹಾವಿದ್ಯಾಲಯದ ಕಾರ್ಯದರ್ಶಿ ಪ್ರೊ.ನಾಗೇಂದ್ರ ತಿಳಿಸಿದರು.
ಮಂಡ್ಯ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿ ಡಾ.ಲೋಕನಾಥ್ ಭಾಗವಹಿಸಲಿದ್ದು ಸಂಸ್ಥೆಯ ಅಧ್ಯಕ್ಷ ಡಾ.ಹೆಚ್ ಪಿ ರಾಜು ಅಧ್ಯಕ್ಷತೆ ವಹಿಸುವರು ಎಂದರು.
2014-15ನೇ ಸಾಲಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಸ್ವಾಮ್ಯಕ್ಕೆ ಒಳಪಟ್ಟು ಕಾಲೇಜನ್ನು ಆರಂಭಿಸಲಾಗಿದೆ. ಮೊದಲಿಗೆ ಕಂಪ್ಯೂಟರ್ ಸೈನ್ಸ್ ಮತ್ತು ಇಂಜಿನಿಯರಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಷನ್, ಸಿವಿಲ್ ಇಂಜಿನಿಯರಿಂಗ್ ಮತ್ತು ಮೆಕಾನಿಕಲ್ ಇಂಜಿನಿಯರಿಂಗ್ ಕೋರ್ಸ್ ಗಳನ್ನು ಆರಂಭಿಸಲಾಯಿತು. ಈಗ ಅದರ ಜೊತೆಗೆ ಬಿಕಾಂ ,ಎಂಸಿಎ, ಸ್ನಾತಕೋತ್ತರ ಪದವಿಯನ್ನು ಸಹ ಆರಂಭಿಸಲಾಗಿದೆ ಎಂದು ತಿಳಿಸಿದರು.
ಗೋಷ್ಠಿಯಲ್ಲಿ ಕಾಲೇಜಿನ ಅಧ್ಯಕ್ಷ ರಾಜು, ಪ್ರಾಂಶುಪಾಲ ಶ್ರೀಕಂಠಪ್ಪ, ಉಪ ಪ್ರಾಂಶುಪಾಲ ಡಾ.ಮಂಜುನಾಥ್ ಉಪಸ್ಥಿತರಿದ್ದರು.