ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸುಮಾರು ಎಂಟು ಕೋಟಿ ರೂ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸುರೇಶ್ ಗೌಡ ಗುರುವಾರ ಗುದ್ದಲಿ ಪೂಜೆ ನೆರವೇರಿಸಿದರು.
ತಾಲ್ಲೂಕಿನ ದೊಂದೆ ಮಾದಹಳ್ಳಿ ಗ್ರಾಮದಿಂದ ನಾಗಮಂಗಲ ಪಟ್ಟಣದ ಅಮ್ಮನ ಕಟ್ಟೆವರೆಗೆ ಸುಮಾರು ಒಂದು ಕೋಟಿ ವೆಚ್ಚದಲ್ಲಿ ಸಂಪರ್ಕ ರಸ್ತೆಯ ಅಭಿವೃದ್ಧಿ ಕಾಮಗಾರಿ ಹಾಗೂ ಕೆಲಗೆರೆ ಗ್ರಾಮದಲ್ಲಿ 75 ಲಕ್ಷ ರೂ.ವೆಚ್ಚದ ಬ್ರಿಡ್ಜ್ ಕಾಮಗಾರಿ ಮತ್ತು ಅಂಕುಶಪುರ, ತ್ಯಾಪೇನಹಳ್ಳಿ, ಗೌಡರಹಳ್ಳಿ, ದೊಡ್ಡೇಗೌಡನ ಕೊಪ್ಪಲು ಹಾಗೂ ಮೂಡಲ ಮೆಲ್ಲಹಳ್ಳಿ ಗ್ರಾಮಗಳಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಸುರೇಶ್ ಗೌಡ, ತಾಲ್ಲೂಕಿನ ಅಭಿವೃದ್ಧಿಗೆ ನಾನು ಪ್ರಾಮುಖ್ಯತೆ ನೀಡಿದ್ದೇನೆ.ಕ್ಷೇತ್ರದ ಅಭಿವೃದ್ಧಿ ಕಾಮಗಾರಿಗಳನ್ನು ತರಲು ಸಾಕಷ್ಟು ಪ್ರಯತ್ನ ಮಾಡಿದ್ದೇನೆ.ಗುತ್ತಿಗೆದಾರರು ಕಾಮಗಾರಿಯನ್ನು ಉತ್ತಮ ವಾಗಿ ಮಾಡಲು ಗ್ರಾಮಸ್ಥರು ಕೂಡ ಗಮನ. ಹರಿಸಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ಸದಸ್ಯರಾದ ಚನ್ನಪ್ಪ, ಪ್ರಭಾಕರ್, ವಿಜಯಕುಮಾರ್, ಗ್ರಾಮ ಪಂಚಾಯತಿ ಸದಸ್ಯರಾದ ದೊಂದೆ ಮಾದಳ್ಳಿ ನಾಗೇಶ್, ಮುಖಂಡರುಗಳಾದ ರಮೇಶ್ ಶೆಟ್ಟಿ, ಸಿಂಗಾರಿ ಸತೀಶ್, ವಸಂತ್, ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಡಿ.ಟಿ.ಶ್ರೀನಿವಾಸ್ ಹಾಗೂ ಜೆಡಿಎಸ್ ಕಾರ್ಯಕರ್ತರು ಮುಖಂಡರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.