ಮಂಡ್ಯ ತಾಲ್ಲೂಕಿನ ತೂಬಿನಕೆರೆ ಗ್ರಾಮದ ಹೊರವಲಯದಲ್ಲಿ ಜೂಜಾಟ ಆಡುತ್ತಿದ್ದ ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು 8 ಜನರನ್ನು ಬಂಧಿಸಿ, ₹ 48,860 ಹಣ ವಶಪಡಿಸಿಕೊಂಡಿದ್ದಾರೆ.
ತೂಬಿನಕೆರೆ ಬಳಿ ಜೂಜಾಟದಲ್ಲಿ ತೊಡಗಿದ್ದಾರೆ ಎಂಬ ಸಾರ್ವಜನಿಕ ದೂರಿನ ಹಿನ್ನಲೆಯಲ್ಲಿ ಎಸ್ಪಿ ಯತೀಶ್ ಎನ್ ಅವರ ಮಾರ್ಗದರ್ಶನದಲ್ಲಿ ಮಂಡ್ಯ ಗ್ರಾಮಾಂತರ ಠಾಣೆ ಪೊಲೀಸ್ ಇನ್ಸ್’ಪೆಕ್ಟರ್ ಸಿದ್ದಪ್ಪ, ಸಬ್ ಇನ್ಸ್’ಪೆಕ್ಟರ್ ಕೆ.ಎಂ.ಮಹೇಶ್ ನೇತೃತ್ವದ ತಂಡ ದಾಳಿ ನಡೆಸಿ ಜೂಜಾಟದಲ್ಲಿ ತೊಡಗಿದ್ದ 8 ಜನರನ್ನು ಬಂಧಿಸಲಾಗಿದೆ.
ಜೂಜಾಟಕ್ಕೆ ಇಟ್ಟಿದ್ದ ₹ 48, 860 ಹಣವನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.