87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವು ಡಿಸೆಂಬರ್ 20 ರಿಂದ 22 ರವರೆಗೆ 3 ದಿನಗಳ ಕಾಲ ಮಂಡ್ಯದಲ್ಲಿ ನಡೆಯಲಿದ್ದು, ರಚಿತವಾಗಿರುವ ಸಮಿತಿಗಳು ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಿ ಎಂದು ಜಿಲ್ಲಾಧಿಕಾರಿ ಡಾ.ಕುಮಾರ ತಿಳಿಸಿದರು.
ಮಂಡ್ಯ ಜಿಲ್ಲಾ ಪಂಚಾಯತ್ ನ ಕಾವೇರಿ ಸಭಾಂಗಣದಲ್ಲಿ ಬುಧವಾಋ ನಡೆದ 87 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಕ್ಕೆ ಸಂಬಂಧಿಸಿದಂತೆ ಸಮಿತಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಮಿತಿಯ ಎಲ್ಲಾ ಸದಸ್ಯರು ಸಕ್ರಿಯವಾಗಿ ಸಭೆಗಳಲ್ಲಿ ಪಾಲ್ಗೊಳ್ಳಿ ಕಾರ್ಯಕ್ರಮಗಳು ಉತ್ತಮವಾಗಿ ಮೂಡಿ ಬರಲು ಸಮಿತಿಯ ಸದಸ್ಯ ಕಾರ್ಯದರ್ಶಿಗಳು ತಮ್ಮ ಹಂತದಲ್ಲಿ ಸಭೆಗಳನ್ನು ನಡೆಸಿ ಕಾರ್ಯ ಯೋಜನೆಗಳನ್ನು ರೂಪಿಸಿ ಎಂದರು.
ಸಾಂಸ್ಕೃತಿಕ ಹಾಗೂ ಮೆರವಣಿಗೆ ಸಮಿತಿ
ಕನ್ನಡ ಸಾಹಿತ್ಯ ಸಮ್ಮೇಳನದ 3 ದಿನಗಳ ಕಾಲ ಸಂಜೆಯ ವೇಳೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಕಾರ್ಯಕ್ರಮದಲ್ಲಿ 1 ಮುಖ್ಯ ವೇದಿಕೆ ಹಾಗೂ 2 ಸಮಾನಾಂತರ ವೇದಿಕೆ ಇರಲಿದೆ. ಕ್ರಿಯಾಯೋಜನೆ ತಯಾರಿಸಿ ಅಂದಾಜು ಮೊತ್ತವನ್ನು ನೀಡಬೇಕು ಎಂದರು.
ಸಾಂಸ್ಕೃತಿಕ ಹಾಗೂ ಮೆರವಣಿಗೆ ಸಮಿತಿಯಲ್ಲಿ ಸದಸ್ಯರು ಜಿಲ್ಲೆ, ಹೊರಜಿಲ್ಲೆ, ಹೊರ ರಾಜ್ಯದ ಕಲಾವಿದರಿಗೆ ಆದ್ಯತೆ ನೀಡುವಂತೆ ಇರಬೇಕು. ಡೊಳ್ಳುಕುಣಿತ ಎಂದ ಕೂಡಲೇ ಇದು ಕೇವಲ ಒಂದು ಸ್ಥಳ ಅಥವಾ ಒಂದು ಸಂಘಕ್ಕೆ ಸೀಮಿತವಾಗಬಾರದು. ಈ ಕಲೆಯಲ್ಲಿರುವ ಎಲ್ಲರನ್ನೂ ಒಗ್ಗೂಡಿಸಿ ತಂಡ ರಚಿಸುವುದು ಎಂದರು.
ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬೇರೆ ಬೇರೆ ಜಿಲ್ಲೆ ಹಾಗೂ ರಾಜ್ಯಗಳಿಗೂ ಆದ್ಯತೆ ನೀಡುವುದರಿಂದ ವಿವಿಧ ಕಲಾ ಪ್ರಕಾರಗಳನ್ನು ತಿಳಿಸಬಹುದು. ಆದ್ದರಿಂದ ಇಡೀ ಜಿಲ್ಲೆ ಹಾಗೂ ರಾಜ್ಯದ ಕಲಾ ತಂಡಗಳಿಗೆ ಅವಕಾಶ ನೀಡಲಾಗುವುದು. ಪ್ರತಿ ಜಿಲ್ಲೆಯನ್ನು ಪ್ರತಿನಿಧಿಸುವ ಕಲಾ ತಂಡಗಳಿಗೂ ಸಹ ಅವಕಾಶ ನೀಡಲಾಗುತ್ತದೆ. ಮೆರವಣಿಗೆಯಲ್ಲಿ ಸ್ಥಳೀಯ ತಂಡಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದರು.
ಉತ್ತಮ ಗುಣಮಟ್ಟವಿರುವ ಲೇಖನಗಳನ್ನು ಆಯ್ಕೆ ಮಾಡಿ
ಸ್ಮರಣಾ ಸಂಚಿಕೆ ಸ್ಮರಣಾ ಸಂಚಿಕೆಯನ್ನು ಸಾಹಿತ್ಯ ಸಮ್ಮೇಳನ ನಡೆಯುವ 3 ದಿನಗಳ ಅವಧಿಯಲ್ಲಿ ಬಿಡುಗಡೆ ಮಾಡಲು ಸಿದ್ಧತೆ ಮಾಡಿಕೊಳ್ಳಿ. ಇದು ಉತ್ತಮವಾಗಿ ಮೂಡಿಬರಲು ಕನ್ನಡ ನಾಡು, ನುಡಿ, ಕಲೆಯ ಬಗ್ಗೆ ಲೇಖನಗಳನ್ನು ಸಂಗ್ರಹಿಸಿ ಇದು ವಿಷಾಯಧಾರಿತವಾಗಿರಲಿ. ಹೊರ ರಾಜ್ಯ ಹಾಗೂ ಜಿಲ್ಲೆಯವರಿಗೆ ಮಾಹಿತಿ ನೀಡಿ ಸಂಗ್ರಹಿಸಿ. ಉತ್ತಮ ಗುಣಮಟ್ಟವಿರುವ ಲೇಖನಗಳನ್ನು ಆಯ್ಕೆ ಮಾಡಿ ಎಂದರು.
ಆರೋಗ್ಯ ಮತ್ತು ಸ್ವಚ್ಛತಾ ಸಮಿತಿ ಪ್ರತಿ ದಿನ ಒಂದುವರೆ ಲಕ್ಷ ಜನರು ಭಾಗವಿಸುವ ನಿರೀಕ್ಷೆ ಇದೆ. ಸ್ವಚ್ಛತೆಗೆ ಬೇಕಿರುವ ತಂಡಗಳನ್ನು ರಚಿಸಿಕೊಳ್ಳಿ. ಪಾರ್ಕಿಂಗ್, ವೇದಿಕೆ, ಆಹಾರ ಕೌಂಟರ್ ಗಳಲ್ಲಿ ಇನ್ನಿತರೆ ಸ್ಥಳಗಳಲ್ಲಿ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳ ಬೇಕಿರುತ್ತದೆ. ಹೆಚ್ಚಿನವರು ಜನರು ಬೇಕಿದ್ದು, ಸ್ವಯಂ ಸೇವಕರು ಹಾಗೂ ಎನ್.ಎಸ್.ಎಸ್ ವಿದ್ಯಾರ್ಥಿಗಳನ್ನು ಪಡೆದುಕೊಳ್ಳಿ. ತಂಡ ರಚಿಸಿ ಈಗಿನಿಂದಲೇ ಅವರಿಗೆ ತರಬೇತಿ ನೀಡಿ ಎಂದರು.
ತಾತ್ಕಾಲಿಕ ಆಸ್ಪತ್ರೆ
ತಾತ್ಕಾಲಿಕ ಆಸ್ಪತ್ರೆ ತೆರೆದು ವೈದ್ಯರು ಹಾಗೂ ಇನ್ನಿತರೆ ಸಿಬ್ಬಂದಿಗಳನ್ನು ನಿಯೋಜಿಸಿಕೊಳ್ಳಿ, ಔಷಧಿ ಹಾಗೂ ಬೇಕಿರುವ ಇನ್ನಿತರೆ ವಸ್ತುಗಳನ್ನು ದಾಸ್ತನು ಮಾಡಿಕೊಳ್ಳಿ. ಆಹಾರ ತಯಾರಿಕೆ ಸ್ಥಳದಲ್ಲಿ ಹೆಚ್ಚಿನ ಆಹಾರ ಸುರಕ್ಷತಾ ಅಧಿಕಾರಿಗಳ ಅವಶ್ಯಕತೆ ಇದ್ದು, ನಿಯೋಜಿಸಿಕೊಳ್ಳಲು ಕೇಂದ್ರ ಕಚೇರಿಗೆ ಪತ್ರ ಬರೆಯಿರಿ. ಸ್ಥಳ ಪರಿಶೀಲನೆ ನಡೆಸಿ ತಾತ್ಕಾಲಿಕ ಶೌಚಾಲಯಗಳನ್ನು ತೆರೆಯಲು ಯೋಜನೆ ರೂಪಿಸಿಕೊಳ್ಳಿ ಎಂದರು.
ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಡಾ ಹೆಚ್ ಎಲ್ ನಾಗರಾಜುರವರು ಮಾತನಾಡಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವಾಗಿರುವುದರಿಂದ ವಿಭಿನ್ನ ಕಲಾ ತಂಡಗಳಿಗೆ ಹೆಚ್ಚಿನ ಆದ್ಯತೆ ನೀಡುವುದರಿಂದ ಎಲ್ಲಾ ಕಲಾ ಪ್ರಕಾರಗಳಿಗೂ ಅವಕಾಶ ನೀಡುವುದು ಮುಖ್ಯವಾಗಿದೆ. ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 1 ದಿನಕ್ಕೆ ಎಷ್ಟು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಬಹುದು ಎಂದು ಸಮಿತಿಯಲ್ಲಿ ಚರ್ಚಿಸಿ, ಸಮಯವನ್ನು ನಿಗಧಿಪಡಿಸಿ ಎಂದರು.
ಆರೋಗ್ಯ ಮೈಕ್ರೋ ಲೆವಲ್ ಪ್ಕ್ಯಾನ್ ಮಾಡಿ ಬೇರೆ ಜಿಲ್ಲೆಯಿಂದ ಸೆಳೆದು ನಿಯೋಜಿಸಿಕೊಳ್ಳಬಹುದು. ಪ್ರತಿ ಕಡೆ ವೈದ್ಯರನ್ಬೊಳಗೊಂಡ ಯುನಿಟ್ ರಚಿಸಿ. ಚಿಕ್ಕ ಅಂಬ್ಯೂಲೆನ್ಸ್ ಗಳನ್ನು ನಿಯೋಜನೆ ಮಾಡಿಕೊಳ್ಳಿ. ಖಾಸಗಿ ಆಸ್ಪತ್ರೆ ಯವರಿಗೆ ಸಹ ಪತ್ರ ಬರೆದು ಅವರನ್ನು ಸಹ 3 ದಿನಗಳನ್ನು ನಿಯೋಜಿಸಿಕೊಡುವಂತೆ ಮನವಿ ಮಾಡಿ ಎಂದರು.
ಸಭೆಯಲ್ಲಿ ಉಪವಿಭಾಗಾಧಿಕಾರಿ ಶಿವಮೂರ್ತಿ ಕನ್ನಡ ಸಾಹಿತ್ಯ ಸಮ್ಮೇಳನದ ಸಮನ್ವಯ ಸಮಿತಿ ಅಧ್ಯಕ್ಷೆ ಡಾ. ಮೀರಾ ಶಿವಲಿಂಗಯ್ಯ, ಸೇರಿದಂತೆ ವಿವಿಧ ಸಮಿತಿಯ ಹೆಚ್.ಎಸ್ ಮುದ್ದೇಗೌಡ, ತೈಲೂರು ವೆಂಕಟಕೃಷ್ಣ, ಮ. ರಾಮಕೃಷ್ಣ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.