Thursday, September 19, 2024

ಪ್ರಾಯೋಗಿಕ ಆವೃತ್ತಿ

ಅಮ್ ಆದ್ಮಿ ಪಾರ್ಟಿಗೆ ಸೇರ್ಪಡೆ

ಮಂಡ್ಯ ನಗರದ ಅಮ್ ಆದ್ಮಿ ಪಕ್ಷದ ಕಚೇರಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಬೂದನೂರು ಬೊಮ್ಮಯ್ಯ ನೇತೃತ್ವದಲ್ಲಿ ಹಿರಿಯ ಮುಖಂಡ ಬಸರಾಳು ಕೃಷ್ಣಪ್ಪ ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆಗೊಂಡರು.

ನಂತರ  ಮಾತನಾಡಿದ ಬೂದನೂರು ಬೊಮ್ಮಯ್ಯ, ನಮ್ಮ ಪಕ್ಷ ಸಮಾಜದ ಏಳಿಗೆಗಾಗಿ ಶ್ರಮಿಸುತ್ತಿದೆ ಪಕ್ಷದ ಕಾರ್ಯವೈಖರಿಯನ್ನು ಗಮನಿಸಿ ಮುಖಂಡರು ಸೇರ್ಪಡೆಗೊಳ್ಳುತ್ತಿದ್ದಾರೆ.

ನಮ್ಮ ಪಕ್ಷ ಶಿಕ್ಷಣ, ಆರೋಗ್ಯ ಸೇರಿದಂತೆ ಮೂಲಭೂತ ಸೌಕರ್ಯ ಕಲ್ಪಿಸಿಕೊಡುವಲ್ಲಿ ನಮ್ಮ ಪಕ್ಷ ಪ್ರಾಮಾಣಿಕ ಕೆಲಸ ಮಾಡುತ್ತಾ ಬಂದಿದೆ. ಪ್ರಜಾಪ್ರಭುತ್ವ ಉಳಿಸುವ ಕೆಲಸವನ್ನು ನಾವೆಲ್ಲ ಮಾಡಬೇಕಾಗಿದೆ, ಮುಂದಿನ ದಿನಗಳಲ್ಲಿ ಕೇಜ್ರಿವಾಲ್ ಅವರನ್ನು ಕರ್ನಾಟಕಕ್ಕೆ ಬರಮಾಡಿಕೊಳ್ಳುತ್ತೇವೆ ಎಂದರು.

ಕಾರ‍್ಯಕ್ರಮದಲ್ಲಿ ಮುಖಂಡರಾದ ಅಂದಾನಿ ಗೌಡ, ರಾಜು, ಚಿಕ್ಕ ಸಿದ್ದೇಗೌಡ, ಶಿವಣ್ಣ, ವೀರಶೆಟ್ಟಿ ಸೇರಿದಂತೆ ಇತರದಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!