Friday, September 20, 2024

ಪ್ರಾಯೋಗಿಕ ಆವೃತ್ತಿ

ಸಂಸದೆ ಸುಮಲತಾ ಶ್ರಮದಿಂದ ಶ್ರಮಿಕರಿಗೆ ಮನೆ:ಎಚ್.ಬಿ.ಅರವಿಂದ್‌ಕುಮಾರ್

ದೇಶ ಕಂಡ ಅಪರೂಪದ ರಾಜಕಾರಣಿ ಡಾ. ಅಂಬರೀಶ್ ಅವರು ನಾಡಿನ ವಸತಿ ಸಚಿವರಾಗಿದ್ದ ಅವಧಿಯಲ್ಲಿ ಹಾಲಹಳ್ಳಿ ಸ್ಲಂ ಜನತೆಗೆ ಮನೆ ನಿರ್ಮಿಸುವ ಕಾರ್ಯ ಆರಂಭವಾಗಿತ್ತು. ಆದರೆ ಅವರ ಅಕಾಲಿಕ ಮರಣದ ನಂತರ ಸಂಸದರಾದ ಸುಮಲತಾ ಅಂಬರೀಶ್ ಜವಾಬ್ದಾರಿ ನಿಭಾಯಿಸಿದರು ಎಂದು ಜಿಲ್ಲಾ ಸ್ವಾಭಿಮಾನಿ ಪಡೆ ಕಾರ್ಯಾಧ್ಯಕ್ಷ ಎಚ್.ಬಿ.ಅರವಿಂದ್‌ಕುಮಾರ್ ಹೇಳಿದರು.

ಮಂಡ್ಯ ನಗರದ ಹಾಲಹಳ್ಳಿ ಸ್ಲಂ ಬೋರ್ಡ್( ಡಾ.ಎಂ.ಎಚ್.ಅಂಬರೀಶ್ ನಗರ)ನ ರಸ್ತೆಯಂಚಿನಲ್ಲಿ ಜಿಲ್ಲಾ ಸ್ವಾಭಿಮಾನಿ ಪಡೆ, ಸುಮಲತಾ ಅಂಬರೀಶ್ ಅಭಿಮಾನಿಗಳ ಬಳಗ ಆಯೋಜಿಸಿದ್ದ ಯಂಗ್ ರೆಬೆಲ್ ಸ್ಟಾರ್ ಅಭಿಷೇಕ್ ಅಂಬರೀಶ್ ಅವರ ಜನ್ಮದಿನ ಪ್ರಯುಕ್ತ ಸಸ್ಯೋತ್ಸವ ಕಾರ್ಯಕ್ರಮಕ್ಕೆ ಸಸಿಗಳನ್ನು ನೆಡುವ ಮೂಲಕ ಚಾಲನೆ ನೀಡಿದರು.

ಅಭಿಷೇಕ್ ಅಂಬರೀಶ್ ಅವರ ಜನ್ಮದಿನವನ್ನು ಸಸ್ಯೋತ್ಸವ ಮೂಲಕ ಆಚರಿಸುತ್ತಿದ್ದೇವೆ,  ಅಭಿಮಾನಿಗಳಾದ ನಾವು ಅವರ ಹೆಸರನ್ನು ಚಿರಸ್ಥಾಯಿಯಾಗಿ ಮಾಡಲು ಶ್ರಮಿಸುತ್ತೆವೆ ಎಂದರು.

ಕಾರ್ಯಕ್ರಮದಲ್ಲಿ ಸ್ವಾಭಿಮಾನಿ ಪಡೆಯ ಅಧ್ಯಕ್ಷ ಎಚ್.ಪಿ.ಶಶಿಕುಮಾರ್, ಅಖಿಲ ಕರ್ನಾಟಕ ಅಂಬರೀಶ್ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಬೇಲೂರು ಸೋಮಶೇಖರ್, ಅರಣ್ಯ ಇಲಾಖೆಯ ಸಿಬ್ಬಂದಿಗಳು, ಸ್ಥಳೀಯ ನಾಗರೀಕರು ಹಾಜರಿದ್ದರು

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!