ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ನೋಂದಣಿಯಾಗಿರುವ ಕಟ್ಟಡ ಕಾರ್ಮಿಕರು ಹಾಗೂ ಇತರೆ ಕಾರ್ಮಿಕರಿಗೆ ಮಾತ್ರ ಬಸ್ ಪಾಸ್ ವಿತರಿಸಲಾಗುತ್ತದೆ. ಯಾವ ಜಿಲ್ಲೆಯಲ್ಲಿ ನೋಂದಣಿಯಾಗಿದ್ದರೂ ಸಹ ಪಾಸಿನಲ್ಲಿ ನಮೂದಿಸಲಾಗಿರುವ ಪ್ರಾರಂಭಿಕ ಸ್ಥಳದಿಂದ 7 ಹಂತಗಳವರೆಗೆ ನಿಗಮದ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಇಲಾಖೆಯ ಉಚಿತ ಸಹಾಯವಾಣಿ ಸಂಖ್ಯೆ 155214 ಅನ್ನು ಸಂಪರ್ಕಿಸಬಹುದೆಂದು ಮಂಡ್ಯ ವಿಭಾಗದ ಕ.ರಾ.ರ.ಸಾ ನಿಗಮ ವಿಭಾಗೀಯ ನಿಯಂತ್ರಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.