ಮಂಡ್ಯ ತಾಲ್ಲೂಕಿನ ದುದ್ದ ಹೋಬಳಿಯ ಪುರದಕೊಪ್ಪಲು ಗ್ರಾಮದಲ್ಲಿ ಶ್ರೀಶಿವಲಿಂಗೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗೆ ಮೇಲುಕೋಟೆ ಶಾಸಕ ಸಿ.ಎಸ್.ಪುಟ್ಟರಾಜು ಇಂದು ಗುದ್ದಲಿ ಪೂಜೆ ಮಾಡಿದರು.
ಐತಿಹಾಸಿ 70 ವರ್ಷದಷ್ಟು ಹಳೆಯಾದ ದೇವಸ್ಥಾನವನ್ನು ತೆರವುಗೊಳಿಸಿ ನೂತನ ದೇವಾಲಯ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ, ಈ ಸಂದರ್ಭದಲ್ಲಿ ಶಾಸಕ ಸಿ.ಎಸ್.ಪುಟ್ಟರಾಜ ಅವರು ಎತ್ತಿನ ಗಾಡಿಯನ್ನು ಓಡಿಸಿಕೊಂಡು ಹೋಗುವ ಮೂಲಕ ಗಮನ ಸೆಳೆದರು.
ಗ್ರಾಮದ ಮಾರಮ್ಮನ ದೇವಸ್ಥಾನದಿಂದ ಊರಿನ ಜನರು ಮೀಸಲು ನೀರನ್ನು ಹೊತ್ತು ಶ್ರೀ ಶಿವಲಿಂಗೇಶ್ವರ ದೇವಸ್ಥಾನದ ಬಳಿಗೆ ತಮಟೆ ನಗರಿ ಮೂಲಕ ಆಗಮಿಸಿದರು. ಈ ಸಂದರ್ಭದಲ್ಲಿ ಮನ್ ಮುಲ್ ಅಧ್ಯಕ್ಷ ಬಿ.ಆರ್. ರಾಮಚಂದ್ರ, ಮುದಗಂದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಶಂಕರಗೌಡ, ಪ್ರಥಮ ದರ್ಜೆ ಗುತ್ತಿಗೆದಾರರು ಬಾಲ ಚಂದ್ರು, ಸಮಾಜ ಸೇವಕರು ಸುರೇಶ, ಯೋಗೇಶ್, ಸುನೀಲ್ ಮತ್ತು ಗ್ರಾಮದ ಮುಖಂಡರು ಉಪಸ್ಥಿತರಿದ್ದರು.