ಶ್ರೀರಂಗಪಟ್ಟಣ ತಾಲ್ಲೂಕಿನ ಗಂಜಾಂನಲ್ಲಿ ಅಪ್ಪು ಅಭಿಮಾನಿಗಳು, ಖ್ಯಾತ ನಟ ದಿವಂಗತ ಪುನೀತ್ ರಾಜ್ ಕುಮಾರ್ ಪುಣ್ಯ ಸ್ಮರಣೆ ಮಾಡಿದರು.
ಮೊದಲನೆ ವರ್ಷದ ಪುಣ್ಯ ಸ್ಮರಣೆ ಅಕ್ಟೋಬರ್ 29 ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಇಂದು ಗಂಗಾಪರಮೇಶ್ವರಿ ಅಪ್ಪು ಅಭಿಮಾನಿ ಬಳಗದಿಂದ ಗೀತ ಗಾಯನ ಕಾರ್ಯಕ್ರಮದ ಮೂಲಕ ಅಪ್ಪುಗೆ ನಮನ ಸಲ್ಲಿಸಲಾಯಿತು.
ಅಪ್ಪು ಅಭಿಮಾನಿಗಳು ಪುನೀತ್ ರಾಜ್ಕುಮಾರ್ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಪ್ಪಾರ್ಚನೆ ಮಾಡಿದರು.
ಅಪ್ಪು ಪುಣ್ಯಸ್ಮರಣೆ ಅಂಗವಾಗಿ ಜನರಿಗೆ ಬಾಡೂಟದ ಅನ್ನ ಸಂತರ್ಪಣೆ ಮಾಡಲಾಯಿತು.
ಗ್ರಾಮದ ಮುಖಂಡರಾದ ನಾರಾಯಣ್, ಕೃಷ್ಣಪ್ಪ, ವೆಂಕಟರಾಜಪ್ಪ, ನಾಗೇಶ್,ಚನ್ನಪ್ಪ ಕುಮಾರ್, ವೆಂಕಟೇಶ್ ಸೇರಿದಂತೆ ಹಲವಾರು ಮಂದಿ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.