Friday, September 20, 2024

ಪ್ರಾಯೋಗಿಕ ಆವೃತ್ತಿ

ಕಟ್ಟಡ ಕೂಲಿ ಕಾರ್ಮಿಕ ಮಕ್ಕಳಿಗೆ ಟ್ಯಾಬ್ ವಿತರಣೆ

ಕರ್ನಾಟಕ ರಾಜ್ಯ ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯಿಂದ ನೋಂದಾಯಿತ ಕಟ್ಟಡ ಕಾರ್ಮಿಕರ 6 ರಿಂದ 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಶೈಕ್ಷಣಿಕ ಮಕ್ಕಳಿಗೆ ವಿದ್ಯಾಭ್ಯಾಸದ ಉದ್ದೇಶಕ್ಕಾಗಿ ಟ್ಯಾಬ್ ಗಳನ್ನು ಹಂತ ಹಂತವಾಗಿ ವಿತರಿಸಲಾಗುತ್ತಿದ್ದು, ಮಂಡ್ಯ ಜಿಲ್ಲೆಯಲ್ಲಿ ಮೊದಲ ಹಂತದಲ್ಲಿ ಟ್ಯಾಬ್ಗಳನ್ನು ಮಂಡಳಿಯ ಮಾರ್ಗಸೂಚಿಯಂತೆ ವಿತರಿಸಲಾಗುತ್ತಿದೆ.

ನೊಂದಾಯಿತ ಕಟ್ಟಡ ನಿರ್ಮಾಣ ಕಾರ್ಮಿಕರ ಆಧಾರ್ ಕಾರ್ಡ್  ಮತ್ತು ಮಗಳು/ಮಗ ನ ಆಧಾರ್ ಕಾರ್ಡ್,  ಮೂಲ ವ್ಯಾಸಂಗ ಪ್ರಮಾಣ ಪತ್ರ ಹಾಗೂ ವಿದ್ಯಾ ಸಂಸ್ಥೆಯ ಹೆಸರು ಮತ್ತು ಪೂರ್ಣ ವಿಳಾಸ ಇತ್ಯಾದಿ.. ವಿವರಗಳನ್ನು ಆಯ ತಾಲೂಕಿನ ಕಾರ್ಮಿಕ ನಿರೀಕ್ಷಕರ ಕಚೇರಿಗೆ ಅಕ್ಟೋಬರ್ 28 ರ ಒಳಗೆ ಸಲ್ಲಿಸಬಹುದು.

ಮೊದಲ ಹಂತದಲ್ಲಿ ಸ್ವೀಕೃತವಾದ ಅರ್ಜಿಗಳನ್ನು ಪರಿಶೀಲಿಸಿ ಜೇಷ್ಠತೆಯ ಆಧಾರದ ಮೇಲೆ ಫಲಾನುಭವಿಯ ಕುಟುಂಬದಲ್ಲಿ ತಲಾ ಒಬ್ಬರಿಗೆ ವಿತರಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ ದೂ.ಸಂ 08232-295210 ಸಂಪರ್ಕಿಸಬಹುದು ಎಂದು ಮಂಡ್ಯ ಉಪ ವಿಭಾಗದ ಕಾರ್ಮಿಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸದಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!