ಒಕ್ಕಲಿಗರ ಜನಸಂಖ್ಯೆಗೆ ಅನುಗುಣವಾಗಿ ಮೀಸಲಾತಿಯನ್ನು ಶೇ. 12ಕ್ಕೆ ಹೆಚ್ಚಿಸಬೇಕು ಎಂಬ ಬೇಡಿಕೆಗೆ ಅಖಿಲ ಕರ್ನಾಟಕ ಒಕ್ಕಲಿಗರ ಸಂಘದ ರಾಜ್ಯಾಧ್ಯಕ್ಷ ನಾಗಣ್ಣ ಬಾಣಸವಾಡಿ ಬೆಂಬಲ ಸೂಚಿಸಿದ್ದು, ಅವರ ಆದೇಶದ ಮೇರೆಗೆ ಮದ್ದೂರು ತಾಲ್ಲೂಕು ಸಂಘ ಅ.28 ರಂದು ಬೃಹತ್ ಕಾಲ್ನಡಿಗೆ ಜಾಥ ಹಮ್ಮಿಕೊಂಡಿದೆ.
ಮೀಸಲಾತಿ ಹೆಚ್ಚಳಕ್ಕೆ ಆದಿಚುಂಚನಗಿರಿ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳು ಧ್ವನಿಗೂಡಿಸಿರುವ ಹಿನ್ನೆಲೆಯಲ್ಲಿ ಮೀಸಲಾತಿಯ ಆಗ್ರಹಕ್ಕೆ ಇನ್ನು ಹೆಚ್ಚಿನ ಪುಷ್ಟಿ ದೊರೆತಿದೆ.
ದಿನಾಂಕ 28 ರಂದು ಮದ್ದೂರು ಪಟ್ಟಣದಲ್ಲಿನ ಪ್ರವಾಸಿ ಮಂದಿರದಿಂದ ಬೈಕ್ ರ್ಯಾಲಿ ಹೊರಟು ತಹಶೀಲ್ದಾರರ ಕಚೇರಿಗೆ ತೆರಳಿ ತಹಸೀಲ್ದಾರರಿಗೆ ಮನವಿ ಸಲ್ಲಿಸಲಾಗುವುದು.ಈ ಬೈಕ್ ರ್ಯಾಲಿಗೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರಬೇಕೆಂದು ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ತಿಪ್ಪೂರು ಮನು ಪತ್ರಿಕಾ ಹೇಳಿಕೆ ನೀಡಿದ್ದಾರೆ.