ಸಾರಿಗೆ ಸಚಿವ ಶ್ರೀರಾಮುಲು ಅವರು ಅ.27ರಂದು ಮಂಡ್ಯ ನಗರಕ್ಕೆ ಭೇಟಿ ನೀಡಲಿದ್ದು, ಅಂದು ಸಂಜೆ 4 ಗಂಟೆಗೆ ಮಂಡ್ಯ ನಗರದ ವಿಠಲ ಭವನದಲ್ಲಿ ನಡೆಯುವ ಭಾರತೀಯ ಜನತಾ ಪಕ್ಷದ ಸಭೆಯಲ್ಲಿ ಭಾಗವಹಿಸಲಿದ್ಧಾರೆ.
ಅವರೊಂದಿಗೆ ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ರಾಜುಗೌಡ, ಶಿವನಗೌಡ ನಾಯಕ್, ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್ಟಿ ಮೋರ್ಚಾ ರಾಜ್ಯಾಧ್ಯಕ್ಷ ತಿಪ್ಪರಾಜು ಭಾಗವಹಿಸುವರು. ಇದೇ ಸಂದರ್ಭದಲ್ಲಿ ಹಲವು ಎಸ್ಸಿ, ಎಸ್ಪಿ ಮುಖಂಡರು ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆಂದು ಬಿಜೆಪಿ ಜಿಲ್ಲಾ ಮಾಧ್ಯಮ ವಕ್ತಾರ ಸಿ.ಟಿ. ಮಂಜುನಾಥ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.