Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಂತಾರ ಚಿತ್ರದ ಹಾಡು ಪ್ರಸಾರಕ್ಕೆ ನ್ಯಾಯಾಲಯ ತಡೆಯಾಜ್ಞೆ


  • ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ 

  • ತಡೆಯಾಜ್ಞೆ ನೀಡಿದ ಕೋಝಿಕ್ಕೋ‌ಡ್‌ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ

ಕಾಂತಾರ ಚಿತ್ರದ ‘ವರಾಹ ರೂಪಂ’ ಹಾಡಿನ ವಿರುದ್ಧ ಕೇರಳ ಮೂಲದ ಜನಪ್ರಿಯ ಸಂಗೀತ ಬ್ಯಾಂಡ್ ಥೈಕ್ಕುಡಂ ಬ್ರಿಡ್ಜ್ ದಾಖಲಿಸಿದ್ದ ಹಕ್ಕುಸ್ವಾಮ್ಯ ಉಲ್ಲಂಘನೆಯ ಮೊಕದ್ದಮೆ ವಿಚಾರಣೆ ನಡೆಸಿದ ನ್ಯಾಯಾಲಯ, ಹಾಡನ್ನು ಪ್ಲೇ ಮಾಡದಂತೆ ಸ್ಟ್ರೀಮಿಂಗ್ ಫ್ಲಾಟ್‌ಫಾರ್ಮ್‌ಗಳಿಗೆ ತಡೆಯಾಜ್ಞೆ ನೀಡಿದೆ.

ಕಾಂತಾರ ಚಿತ್ರದ ವರಾಹ ರೂಪಂ ಹಾಡು ಮತ್ತು 2015 ರಲ್ಲಿ ಬಿಡುಗಡೆಯಾದ ಥಕ್ಕುಡಂ ಬ್ರಿಡ್ಜ್‌‌ನ ‘ನವರಸಂ’ ಗೀತೆ ನಡುವೆ ‘ಸಾಮ್ಯತೆ’ ಇದೆ ಎಂದು ಆರೋಪಿಸಲಾಗಿದೆ.

ಕೇರಳದ ನ್ಯಾಯಾಲಯ ನೀಡಿದ ತಡೆಯಾಜ್ಞೆ ಬಗ್ಗೆ ಇನ್ಸ್‌ಟ್ರಾಗ್ರಾಂ‌‌ನಲ್ಲಿ ಹಂಚಿಕೊಂಡಿದ್ದು,“ಎಲ್ಲರ ನಿರಂತರ ಬೆಂಬಲಕ್ಕಾಗಿ ಧನ್ಯವಾದಗಳು” ಎಂದು ಹೇಳಿದೆ. ಕೋಝಿಕ್ಕೋ‌ಡ್‌ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು, ನಿರ್ಮಾಪಕ, ನಿರ್ದೇಶಕ, ಸಂಗೀತ ಸಂಯೋಜಕರು, ಅಮೇಜಾನ್, ಯೂಟ್ಯೂಬ್‌, ಸ್ಪೋಟಿಫೈ, ವಿಂಕ್ ಮ್ಯೂಸಿಕ್, ಜಿಯೋಸಾವನ್ ಮತ್ತು ಇತರರು ಕಾಂತಾರ ಚಿತ್ರದ ವರಾಹ ರೂಪಂ ಹಾಡನ್ನು ಥೈಕ್ಕುಡಂ ಬ್ರಿಡ್ಜ್‌ನ ಅನುಮತಿಯಿಲ್ಲದೆ ನುಡಿಸದಂತೆ ತಡೆಯಾಜ್ಞೆ ನೀಡಿದ್ದಾರೆ ಎಂದು ಇನ್ಸ್‌ಗ್ರಾಮ್‌ ಪೋಸ್ಟ್‌ನಲ್ಲಿ ಥೈಕ್ಕುಡಂ ಬ್ರಿಡ್ಜ್‌‌ ಬರೆದಿದೆ.

 

 

View this post on Instagram

 

A post shared by Thaikkudam Bridge (@thaikkudambridge)

“>

ಥೈಕ್ಕುಡಂ ಬ್ರಿಡ್ಜ್‌ ಸಂಗೀತದ ಪರವಾಗಿ ಭಾರತದ ಸುಪ್ರೀಂ ಕೋರ್ಟ್ ವಕೀಲರಾದ ಸತೀಶ್ ಮೂರ್ತಿ ಅವರು ತಡೆಯಾಜ್ಞೆಗಾಗಿ ಮೊಕದ್ದಮೆ ಹೂಡಿದ್ದಾರೆ ಎಂದು ಇನ್ಸ್‌ಟ್ರಾಗ್ರಾಂ ಪೋಸ್ಟ್ ಹೇಳಿದೆ. ಇನ್ನು ಮುಂದಕ್ಕೆ ವರಾಹ ರೂಪಂ ಹಾಡನ್ನು ಪ್ಲೇ ಮಾಡಬೇಕಾದರೆ ಕಾಂತಾರ ಚಿತ್ರ ತಂಡವೂ ನ್ಯಾಯಾಲಯದ ಮೊರೆ ಹೋಗಬೇಕಾಗುತ್ತದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದ್ದು, ಅಜನೀಶ್ ಬಿ.ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ‘ವರಹ ರೂಪಂ’ ಹಾಗೂ ‘ಸಿಂಗಾರ ಸಿರಿಯೇ’ ಹಾಡಿನ ಟ್ಯೂನ್‌ಗಳ ಮೇಲೆ ಕೃತಿಚೌರ್ಯದ ಆಕ್ಷೇಪಗಳನ್ನು ಹಲವಾರು ಪ್ರೇಕ್ಷಕರು ಈ ಹಿಂದೆಯೆ ಮಾಡಿದ್ದರು. ಅಲ್ಲದೆ ಚಿತ್ರದ ‘ಸಿಂಗಾರ ಸಿರಿಯೇ’ ಹಾಡಿಗೂ ‘ಅಜಯ್‌- ಅತುಲ್‌’ ಅವರ ‘ಅಪ್ಸರ ಆಲಿ’ ಹಾಡಿಗೂ ಸಾಮ್ಯತೆಯನ್ನು ಪ್ರೇಕ್ಷಕರು ಗುರುತಿಸಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!