ಮಂಡ್ಯ ಜಿಲ್ಲೆಗೆ ನೂತನ ಉಪ ವಿಭಾಗಾಧಿಕಾರಿಯಾಗಿ ಎಚ್.ಎಸ್ ಕೀರ್ತನ ಇಂದು ಅಧಿಕಾರ ಸ್ವೀಕಾರ ಮಾಡಿದರು. ಬೀದರ್ ಜಿಲ್ಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರನ್ನು ಮಂಡ್ಯಕ್ಕೆ ವರ್ಗಾವಣೆ ಮಾಡಲಾಗಿದೆ. 2020ನೇ ಸಾಲಿನಲ್ಲಿ ಐಎಎಸ್ ಅಧಿಕಾರಿಯಾಗಿ ಆಯ್ಕೆಯಾಗಿದ್ದ ಇವರು ಬೀದರ್ ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ಮಂಡ್ಯ ಉಪವಿಭಾಗಾಧಿಕಾರಿಯಾಗಿದ್ದ ಆರ್.ಐಶ್ವರ್ಯ ಅವರನ್ನು ಬೇರೆಡೆಗೆ ವರ್ಗಾವಣೆ ಮಾಡಲಾಗಿದೆ.
ಬಿ.ಸಿ.ಶಿವಾನಂದಮೂರ್ತಿ ವರ್ಗಾವಣೆ
ಪಾಂಡವಪುರ ಉಪ ವಿಭಾಗಾಧಿಕಾರಿಯಾಗಿದ್ದ ಬಿ.ಸಿ.ಶಿವಾನಂದ ಮೂರ್ತಿ ಅವರನ್ನು ಸರ್ಕಾರ ವರ್ಗಾವಣೆ ಮಾಡಿದ್ದು, ಅವರ ಜಾಗಕ್ಕೆ 2020ರ ಸಾಲಿನ ಐಎಎಸ್ ಅಧಿಕಾರಿ ನೋಂಗ್ಜೈ ಮೊಹಮ್ಮದ್ ಅಲಿ ಅಕ್ರಮ್ ಶಾ ಅವರನ್ನು ನಿಯೋಜನೆ ಮಾಡಿ ಆದೇಶ ಹೊರಡಿಸಿದೆ.