Thursday, September 19, 2024

ಪ್ರಾಯೋಗಿಕ ಆವೃತ್ತಿ

ಪಂಚರತ್ನ ಯೋಜನೆಯಿಂದ ಜನರಿಗೆ ಅನುಕೂಲ : ಕಲ್ಪನಾ ರಾಮಚಂದ್ರು

ರಾಜ್ಯದ ಜನರ ದೃಷ್ಠಿಯಿಂದ ಜೆಡಿಎಸ್‌ ಪಕ್ಷ ಪಂಚರತ್ನ ಯೋಜನೆ ಜಾರಿಗೆ ತರಲಾಗಿದೆ, ಜನರು ಜೆಡಿಎಸ್‌ ಪಕ್ಷದ ಸರ್ಕಾರ ರಚನೆಗೆ ಆಶೀರ್ವಾದ ಮಾಡಿದರೆ, ಈ ಯೋಜನೆಯಿಂದ ಅನುಕೂಲವಾಗಲಿದೆ ಮಂಡ್ಯ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಟಿಕೆಟ್ ಆಕಾಂಕ್ಷಿ ಬಿ.ಆರ್.ರಾಮಚಂದ್ರು ಅವರ ಪತ್ನಿ ಕಲ್ಪನಾ ಹೇಳಿದರು.

ಮಂಡ್ಯ ತಾಲ್ಲೂಕಿನ ದೊಡ್ಡಬಾಣಸವಾಡಿ ಹಾಗೂ ನಂಜೇಗೌಡನಕೊಪ್ಪಲು ಗ್ರಾಮಕ್ಕೆ ಭೇಟಿ ನೀಡಿ ಊರಿನ ಮಹಿಳೆಯರು ಹಾಗೂ ಮುಖಂಡರ ಜೊತೆ ಜೆಡಿಎಸ್ ಪಕ್ಷದ ಕಾರ್ಯಕ್ರಮಗಳ ಕುರಿತು ಚರ್ಚೆ ನಡೆಸಿ ಅವರು ಮಾತನಾಡಿದರು.

ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಮುಖ್ಯ
ಮಂತ್ರಿಯಾಗಿ ಸರ್ಕಾರ ರಚಿಸುವುದು ಶತಸಿದ್ಧ. ಅದಕ್ಕೆ ಜನರು ಜೆಡಿಎಸ್ ಪಕ್ಷವನ್ನು ಬೆಂಬಲಿಸುವಂತೆ ಮನವಿ ಮಾಡಿದರು.

ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ ಮಂಡ್ಯವಿಧಾನಸಭಾ ಕ್ಷೇತ್ರದಲ್ಲಿ ಸರ್ಕಾರಿ ಶಾಲಾ ಮಕ್ಕಳಿಗೆ ಬ್ಯಾಗ್ ವಿತರಣೆ ಮಾಡಿದ್ದೇವೆ ಹಾಗೂ ಹಲವು ಸಮಾಜಮುಖಿ ಸೇವೆಗಳನ್ನು ಸಲ್ಲಿಸುತ್ತಿದ್ದೇವೆ. ಮಂಡ್ಯ ವಿಧಾನಸಭಾ ಕ್ಷೇತ್ರದ ಪ್ರತಿ ಹಳ್ಳಿ ಹಳ್ಳಿಯ ಮನೆಗಳಿಗೆ ಭೇಟಿ ನೀಡಿ, ನಿಮ್ಮ ಮನೆ ಮಗಳಾಗಿ ಜೆಡಿಎಸ್ ಪಕ್ಷ ಸಂಘಟಿಸುವ ಗುರಿ ಹೊಂದಿದ್ದೇನೆ, ನಿಮ್ಮೆಲ್ಲರ ಆಶೀರ್ವಾದ ನಮ್ಮ ಕುಟುಂಬದ ಮೇಲೆ ಇರಲಿ ಎಂದು ಮನವಿ ಮಾಡಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!