Thursday, September 19, 2024

ಪ್ರಾಯೋಗಿಕ ಆವೃತ್ತಿ

”ಡಬಲ್ ಆಗಿದ್ದು ರೈತರ ಆದಾಯವಲ್ಲ- ಖರ್ಚು” ಪ್ರಸನ್ನ ಎನ್.ಗೌಡ ವಾಗ್ದಾಳಿ

ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಆದಾಯವನ್ನ ಡಬಲ್ ಮಾಡುವುದಾಗಿ ಆಶ್ವಾಸನೆ ನೀಡುತ್ತಿದ್ದಾರೆ, ಆದರೆ ವಾಸ್ತವದಲ್ಲಿ ಅವರು, ಅಧಿಕಾರಕ್ಕೆ ಬಂದ ನಂತರ ವ್ಯವಸಾಯಕ್ಕೆ ಮಾಡುತ್ತಿದ್ದ ಖರ್ಚು ಡಬಲ್ ಆಗಿದೆ ಎಂದು ರೈತ ಮುಖಂಡ ಪ್ರಸನ್ನ ಎನ್.ಗೌಡ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ಮಂಡ್ಯದಲ್ಲಿ ಇಂದು ರೈತಸಂಘದ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿದ ಸಂದರ್ಭದಲ್ಲಿ ರೈತರನ್ನುದ್ದೇಶಿ ಅವರು ಮಾತನಾಡಿದರು.

ಕಳೆದ 2 ವಿಧಾನಸಭಾ ಅಧಿವೇಶನಗಳಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಲು ನಾವು ಪ್ರತಿಭಟನೆ ಮಾಡುತ್ತಿದ್ದೇವೆ, ಈ ಸರ್ಕಾರಕ್ಕೆ ಏನೂ ಅನಿಸುತ್ತಿಲ್ಲವೇ ? ಕಳೆದ ಭಾರೀ ಹೋರಾಟ ನಡೆಸಿದ್ದಾಗ ಉಸ್ತುವಾರಿ ಸಚಿವರಾಗಿದ್ದ ನಾರಾಯಣಗೌಡ ಇನ್ನೂ 15 ದಿನಗಳನ್ನು ಕಬ್ಬಿಗೆ ಬೆಲೆ ನಿಗದಿ ಮಾಡುವುದಾಗಿ ಭರವಸೆ ನೀಡಿದ್ದರು. ಅವರ ನಂತರ ಮತ್ತೊಬ್ಬ ಸಚಿವರು ಬಂದರೂ ಅವರು ಬಂದರೂ ನಮ್ಮ ಬೇಡಿಕೆಗಳು ಹಾಗೇ ಇವೇ, ಇವರಿಗೆ ನಾಚಿಕೆ, ಮಾನ, ಮಾರ್ಯಾದೆ ಇದೇಯಾ ? ಎಂದು ಆಕ್ರೋಶ ವ್ಯಕ್ತಪಡಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!