Thursday, September 19, 2024

ಪ್ರಾಯೋಗಿಕ ಆವೃತ್ತಿ

ಮದ್ದೂರು : `ಕೈ’ ಟಿಕೆಟ್ ಗಾಗಿ ಶಂಕರೇಗೌಡ ಅರ್ಜಿ

ವರದಿ :  ಪ್ರಭು ವಿ.ಎಸ್

ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿತರ ಸಂಖ್ಯೆ ದಿನೇ ದಿನೇ ಹೆಚ್ಚಾಗುತ್ತಿದ್ದು, ಟಿಕೆಟ್ ಪಡೆಯಲು ತೀವ್ರ ಕಸರತ್ತು ಪ್ರಾರಂಭವಾಗಿದೆ.

ಕಾಂಗ್ರೆಸ್ ಪಕ್ಷವು ಟಿಕೆಟ್ ಆಕಾಂಕ್ಷಿತರ ಅರ್ಜಿ ಸ್ವೀಕರಿಸಲು ಅವಧಿ ವಿಸ್ತರಣೆ ಮಾಡಿದ ಬೆನ್ನಲ್ಲೇ ಮದ್ದೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡು ಎಪಿಎಂಸಿ ಮಾರುಕಟ್ಟೆ ಉಪಾಧ್ಯಕ್ಷೆ ಮಮತ ಅವರ ಪತಿ ಶಂಕರೇಗೌಡ ಅರ್ಜಿ ಸಲ್ಲಿಸಿರುವುದು ಕುತೂಹಲ ಕೆರಳಿಸಿದೆ.

ಮದ್ದೂರು ತಾಲೂಕು ವಳಗೆರೆಹಳ್ಳಿ ಗ್ರಾಮದ ದಿ.ವಿ.ಸಿ.ಬೋರೇಗೌಡರ ಪುತ್ರ ಬಿ.ವಿ.ಶಂಕರೇಗೌಡ ಕಾಂಗ್ರೆಸ್ ಬಿ.ಫಾರಂ ಕೋರಿ ಬೆಂಗಳೂರಿನ ಕೆಪಿಸಿಸಿ ಕಚೇರಿಗೆ ಅರ್ಜಿ ಸಲ್ಲಿಸಿದರು. ಅವರು ಕ್ಷೇತ್ರದ ಹಿರಿಯ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರ ಸಲಹೆ ಅರ್ಜಿ ಸಲ್ಲಿಸಿದ್ದೇವೆ ಎಂದಿದ್ದಾರೆ.

ದಿವಂಗತ ವಿ.ಸಿ.ಬೋರೇಗೌಡ ಅವರ ಕುಟುಂಬ ಸುಮಾರು 75 ವರ್ಷಗಳಿಂದ ರಾಜಕೀಯ ಇತಿಹಾಸವುಳ್ಳದ್ದಾಗಿದ್ದು, ಕಾಂಗ್ರೆಸ್ ಪಕ್ಷದ ಏಳಿಗೆಗೆ ಶ್ರಮಿಸುತ್ತ ಬರುತ್ತಿದೆ, ಆದ್ದರಿಂದ ಕಾಂಗ್ರೆಸ್ ಪಕ್ಷದ ವರಿಷ್ಠರು ಬಿ.ಫಾರಂ ನೀಡುತ್ತಾರೆಂಬ ವಿಶ್ವಾಸವಿದೆ ಎಂದಿದ್ದಾರೆ. ಅವರ ಜೊತೆ ಪತ್ನಿ ಮಮತಾ ಉಪಸ್ಥಿತರಿದ್ದರು.

ಗುರುಕಿರಣ್ ಅರ್ಜಿ 

ಕಾಂಗ್ರೆಸ್ ಮುಖಂಡ ಎಸ್.ಎಸ್.ಶಂಕರ್ ಅವರ ಪುತ್ರ ಕೆಪಿಸಿಸಿ ಸದಸ್ಯ ಗುರುಚರಣ್ ಕಾಂಗ್ರೆಸ್ ಟಿಕೆಟ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರೊಂದಿಗೆ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ ಮಾಡಿರುವುದರಿಂದ ಇನ್ನಷ್ಟು ಆಕಾಂಕ್ಷಿತರು ಹೆಚ್ಚಾಗುವ ನಿರೀಕ್ಷೆ ಇದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!