Thursday, September 19, 2024

ಪ್ರಾಯೋಗಿಕ ಆವೃತ್ತಿ

ಕಾಮಗಾರಿ ಗುಣಮಟ್ಟದ ಬಗ್ಗೆ ಜಾಗ್ರತೆ ವಹಿಸಿ : ರವೀಂದ್ರ ಶ್ರೀಕಂಠಯ್ಯ

ಮಂಡ್ಯ ತಾಲ್ಲೂಕಿನ ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸೂನಗಹಳ್ಳಿ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ರವೀಂದ್ರ ಶ್ರೀಕಂಠಯ್ಯ ಕಾಮಗಾರಿಯ ಗುಣಮಟ್ಟದ ಬಗ್ಗೆ ಜನತೆ ಜಾಗ್ರತೆ ವಹಿಸಬೇಕೆಂದರು.

ಸೂನಗಹಳ್ಳಿ ಗ್ರಾಮದಲ್ಲಿ 30 ಲಕ್ಷ ರೂ.ಗಳ ರಸ್ತೆ ಅಭಿವೃದ್ದಿ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು. ನಂತರ 10.60 ಲಕ್ಷ ವೆಚ್ಚದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಚ್ಚುವರಿ ಕೊಠಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದರು.ಹಾಗೆಯೇ 15 ಲಕ್ಷ ರೂ.ವೆಚ್ಚದಲ್ಲಿ ಅಂಬೇಡ್ಕರ್ ಭವನ ನಿರ್ಮಾಣ, 25 ಲಕ್ಷ ರೂ. ವೆಚ್ಚದ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ರವೀಂದ್ರ ಶ್ರೀಕಂಠಯ್ಯ, ಸೂನಗಹಳ್ಳಿ ಗ್ರಾಮದಲ್ಲಿ ಇಂದು 80 ಲಕ್ಷ ಕ್ಕೂ ಹೆಚ್ಚು ಮೊತ್ತದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಗುದ್ದಲಿ ಪೂಜೆ ನೆರವೇರಿಸಲಾಗಿದೆ. ಗ್ರಾಮ ದೇವಾಲಯದ ಸಂಕೀರ್ಣವನ್ನು ಉತ್ತಮ ಗುಣಮಟ್ಟದಲ್ಲಿ ಮಾಡಬೇಕೆಂದು ಗುತ್ತಿಗೆದಾರರಿಗೆ ಸೂಚಿಸಿದ ಅವರು, ಗುಣಮಟ್ಟದ ಕಾಮಗಾರಿ ಮಾಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಮನವಿ ಮಾಡಿದರು.

ಗ್ರಾಮದಲ್ಲಿರುವ ಮಾಜಿ ಸಚಿವ ದಿವಂಗತ ಎಸ್.ಡಿ.ಜಯರಾಂ ಅವರ ಸಮಾಧಿ ಇರುವ ಉದ್ಯಾನವನ ಅಭಿವೃದ್ಧಿಗಾಗಿ ಟೆಂಡರ್ ಆಗಿದೆ. ಎಸ್.ಡಿ.ಜಯರಾಂ ಅವರ ಪುತ್ರ ಅಶೋಕ್ ಜಯರಾಂ ಅವರು ಉದ್ಯಾನವನ ಅಭಿವೃದ್ಧಿಗೆ ರೂಪುರೇಷೆ ಸಿದ್ಧಪಡಿಸಿದ್ದು ಅದರಂತೆ ಅಭಿವೃದ್ಧಿ ಪಡಿಸಲಾಗುವುದು ಎಂದರು.

ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕ ಕಾಳೇಗೌಡ, ಜಿ.ಪಂ.ಮಾಜಿ ಅಧ್ಯಕ್ಷ ತಗ್ಗಹಳ್ಳಿ ವೆಂಕಟೇಶ್, ತಾ.ಪಂ.ಮಾಜಿ ಸದಸ್ಯ ಪ್ರಕಾಶ್, ಸೂನಗಹಳ್ಳಿ ಗ್ರಾ.ಪಂ.ಅಧ್ಯಕ್ಷೆ ಪೂರ್ಣಿಮಾ, ಗ್ರಾ.ಪಂ.ಸದಸ್ಯ ಯತೀಶ್, ಮುಖಂಡ ದೇವರಾಜ್ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!