ಮೇಲುಕೋಟೆಯ ಯೋಗಾನರಸಿಂಹಸ್ವಾಮಿ ದೇವರ ದರ್ಶನಕ್ಕೆ ಬಂದಿದ್ದ
ಮೂವರು ವಿದ್ಯಾರ್ಥಿಗಳ ಮೇಲೆ ಭಾರೀ ಗಾತ್ರದ ಮರವೊಂದು ಬಿದ್ದ ಘಟನೆ ಮೇಲುಕೋಟೆ ಇಂದು ನಡೆದಿದೆ.
ಮೇಲುಕೋಟೆ ಯೋಗಾನರಸಿಂಹಸ್ವಾಮಿ ದರ್ಶನಕ್ಕೆ ಬೆಟ್ಟ ಹತ್ತುವಾಗ ಈ ಘಟನೆ ಸಂಭವಿಸಿದೆ.
ನಂಜನಗೂಡು ಲಯನ್ಸ್ ಶಾಲೆಯ ವಿದ್ಯಾರ್ಥಿಗಳಾದ ನಿಶಾಂತ್ ನಾಯಕ್, ವರುಣ್ ಮತ್ತು ಯೋಗೇಶ್ ಗಾಯಗೊಂಡಿದ್ದಾರೆ. ಮಕ್ಕಳನ್ನು ಇಂದು ಮೇಲುಕೋಟೆ ಪ್ರವಾಸಕ್ಕೆ ಕರೆದುಕೊಂಡು ಬರಲಾಗಿತ್ತು. ಬೆಟ್ಟ ಹತ್ತುವ ವೇಳೆ ಒಣಗಿದ್ದ ಮರ ಮೂವರು ವಿದ್ಯಾರ್ಥಿಗಳ ಮೇಲೆ ಬಿದ್ದಿದೆ. ವಿದ್ಯಾರ್ಥಿಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ವಿದ್ಯಾರ್ಥಿಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.