ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಯಾದ ನಂತರ ನಾಗಮಂಗಲ ಪಟ್ಟಣಕ್ಕೆ ಆಗಮಿಸಿದ ಫೈಟರ್ ರವಿ ಅವರಿಗೆ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಅದ್ದೂರಿ ಸ್ವಾಗತ ನೀಡಿದರು.
ನಾಗಮಂಗಲ ಪಟ್ಟಣದ ಟಿಬಿ ಬಡಾವಣೆಯಲ್ಲಿ ಫೈಟರ್ ಅವರಿಗೆ ಹೂವಿನ ಹಾರ ಹಾಕಿ ಅದ್ದೂರಿಯಾಗಿ ಸ್ವಾಗತಿಸಿ, ಬರಮಾಡಿಕೊಂಡರು. ಟಿ. ಬಿ ಬಡಾವಣೆಯಿಂದ ಬೈಕ್ ಮೆರವಣಿಗೆಯೊಂದಿಗೆ ಕಾರ್ಯಕರ್ತರು, ಅಭಿಮಾನಿಗಳು ಉತ್ಸಾಹದಿಂದ ಫೈಟರ್ ರವಿ ಅವರನ್ನು ಪ್ರಮುಖ ರಸ್ತೆಗಳಲ್ಲಿ ಕರೆತಂದರು.
ಪಟ್ಟಣದ ಶ್ರೀ ಸೌಮ್ಯಕೇಶವ ದೇವಾಲಯಕ್ಕೆ ಭೇಟಿ ನೀಡಿದ ಫೈಟರ್ ರವಿಯವರು ವಿಶೇಷ ಪೂಜೆ ಸಲ್ಲಿಸಿದರು.
ಫೈಟರ್ ರವಿಯವರು ಬಿಜೆಪಿ ಪಕ್ಷ ಸೇರ್ಪಡೆಯಿಂದ ತುಂಬಾ ಸಂತಸವಾಗಿದ್ದು,ಕ್ಷೇತ್ರದಲ್ಲಿ ಹೊಸ ಉತ್ಸಾಹ ಬಂದಿದೆ ಎಂದು ಕಾರ್ಯಕರ್ತರು, ಅಭಿಮಾನಿಗಳು ಹರ್ಷೋದ್ಘಾರ ಮಾಡಿದರು.