ಪಾದಚಾರಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ತೊಂದರೆ ಮಾಡುತ್ತಿರುವ ಸಿಗ್ನಲ್ ವಿದ್ಯುತ್ ಕಂಬ ಕೂಡಲೇ ತೆರವುಗೊಳಿಸುವಂತೆ ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಸಮಿತಿಯ ಮಂಡ್ಯ ಜಿಲ್ಲಾ ಕಾರ್ಯದರ್ಶಿ ಎಂ.ಎಲ್.ತುಳಸೀಧರ್ ಆಗ್ರಹಿಸಿದ್ದಾರೆ.
ಮಂಡ್ಯ ನಗರದ ಮೈಸೂರು-ಬೆಂಗಳೂರು ಹೆದ್ದಾರಿಯ ಫ್ಯಾಕ್ಟರಿ ಸರ್ಕಲ್ ಬಳಿ ತುಂಬಾ ದಿನಗಳಿಂದ ಸಿಗ್ನಲ್ ವಿದ್ಯುತ್ ಕಂಬ ಒಂದು ಮುರಿದು ಬಿದ್ದಿದ್ದು, (ಗಿರಿಯಾಸ್ ಮುಂಭಾಗ) ಸಂಚಾರಿ ಪೊಲೀಸ್ ಠಾಣೆಯ ಸಿಬ್ಬಂದಿಗಳು ಕಂಡರು ಕಾಣಿಸದ ಹಾಗೆ ವರ್ತಿಸುವುದು ಖಂಡನೀಯ.
ಈ ವೃತ್ತದ ಬಳಿ ಸಂಬಂಧಪಟ್ಟ ಸಂಚಾರಿ ಪೋಲಿಸ್ ಸಿಬ್ಬಂದಿಗಳು ದ್ವಿಚಕ್ರ ವಾಹನ ಚಾಲಕರಿಗೆ ಹೆಲ್ಮೆಟ್ ಧರಿಸಿಲ್ಲವೆಂದು ಮತ್ತು ವಾಹನದ ದಾಖಲೆಗಳನ್ನು ಪರಿಶೀಲಿಸಲು ದಂಡ ವಸೂಲಿ ಮಾಡಲು ನಿಂತಿರುತ್ತಾರೆಯೇ ಹೊರತು ಪಾದಚಾರಿಗಳಿಗೆ ಮತ್ತು ವಿದ್ಯಾರ್ಥಿಗಳಿಗೆ ತಿರುಗಾಡಲು ತೊಂದರೆ ಆಗುತ್ತಿರುವ ಸಿಗ್ನಲ್ ವಿದ್ಯುತ್ ಕಂಬವನ್ನು ತೆರವುಗೊಳಿಸದಿರುವುದು ಸರಿಯಲ್ಲ.
ದಯಮಾಡಿ ಸಂಬಂಧಪಟ್ಟ ಸಂಚಾರಿ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳು ಈ ಸಿಗ್ನಲ್ ಕಂಬವನ್ನು ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ಒತ್ತಾಯಿಸಿದ್ದಾರೆ.