ಮಂಡ್ಯ ಜಿಲ್ಲಾಡಳಿತ. ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಇವರ ಸಂಯುಕ್ತಾ ಶ್ರಯದಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಮತ್ತು ಕಲೋತ್ಸವ ಕಾರ್ಯಕ್ರಮ ಡಿ.6ರಂದು ಬೆಳಿಗ್ಗೆ 10 ಗಂಟೆಗೆ ಮಂಡ್ಯ ನಗರದ ಶ್ರೀಲಕ್ಷ್ಮೀ ಜನಾರ್ಧನ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಅಬಕಾರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಎಂ. ಶ್ರೀನಿವಾಸ್ ಅಧ್ಯಕ್ಷತೆ ವಹಿಸುವರು. ರೇಷ್ಮೆ ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣ ಗೌಡ ಭಾಗವಹಿಸುವರು.
ಮುಖ್ಯ ಅತಿಥಿಗಳಾಗಿ ಸಂಸದೆ ಸುಮಲತಾ ಅಂಬರೀಶ್, ಶಾಸಕರಾದ ಮರಿತಿಬ್ಬೇಗೌಡ, ಮಧು ಜಿ.ಮಾದೇಗೌಡ, ದಿನೇಶ್ ಗೂಳಿಗೌಡ, ಡಿ.ಸಿ.ತಮ್ಮಣ್ಣ, ಸಿ.ಎಸ್.ಪುಟ್ಟರಾಜು, ಸುರೇಶ್ಗೌಡ, ಡಾ.ಕೆ.ಅನ್ನದಾನಿ, ರವೀಂದ್ರ ಶ್ರೀಕಂಠಯ್ಯ, ನಗರ ಸಭೆ ಅಧ್ಯಕ್ಷ ಹೆಚ್.ಎಸ್.ಮಂಜು, ನಗರಸಭೆ ಉಪಾಧ್ಯಕ್ಷ ಇಷ್ರತ್ ಫಾತೀಮ, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ಶ್ರೀನಿವಾಸ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಂ ರಾಯಪುರ, ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ, ಜಿ.ಪಂ.ಸಿ.ಇ.ಒ. ಶಾಂತ ಎಲ್ ಹುಲ್ಮನಿ, ಎಸ್ಪಿ ಎನ್.ಯತೀಶ್, ಅಪರ ಜಿಲ್ಲಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಸೇರಿದಂತೆ ಇನ್ನಿತರರು ಭಾಗವಹಿಸುವರು.