ಮಂಡ್ಯದ ಸ್ಪಂದನ ಆಸ್ಪತ್ರೆ, ರಕ್ತನಿಧಿ ಮಿಮ್ಸ್ ಹಾಗೂ ನೆಲದನಿ ಬಳಗದ ವತಿಯಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ ಪರಿನಿರ್ವಾಣ ದಿನದ ಅಂಗವಾಗಿ ಡಿ.6ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ರವರೆಗೆ ಮಂಡ್ಯನಗರದ ಅಶೋಕ ನಗರದ ಸ್ಪಂದನ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು, ಜಿಲ್ಲಾ ಆರೋಗ್ಯಾಧಿಕಾರಿ ಡಾ.ಟಿ.ಧನಂಜಯ, ಜಿಲ್ಲಾ ಕ್ಷಯ ನಿರ್ಮೂಲನಾಧಿಕಾರಿ ಡಾ.ಆಶಾಲತಾ ಹಾಗೂ ಮಿಮ್ಸ್ ವೈದ್ಯಕೀಯ ಅಧೀಕ್ಷಕ ಡಾ.ಶ್ರೀಧರ್ ಭಾಗವಹಿಸುವರು.
ಆಸಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ರಕ್ತದಾನ ಮಾಡುವ ಮೂಲಕ ನೊಂದವರಿಗೆ ನೆರವಾಗಬೇಕೆಂದು ಸ್ಪಂದನ ಆಸ್ಪತ್ರೆ ನಿರ್ದೇಶಕ ಡಾ.ಆದಿತ್ಯಗೌಡ ಐ.ಸಿ ಹಾಗೂ ನೆಲದನಿ ಬಳಗದ ಎಂ.ಸಿ.ಲಂಕೇಶ್ ಮಂಗಲ ಮನವಿ ಮಾಡಿದ್ಧಾರೆ.