Thursday, September 19, 2024

ಪ್ರಾಯೋಗಿಕ ಆವೃತ್ತಿ

ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ದಿಕ್ಕಾರ ಕೂಗಿದ ಕೋಲಾರ ನಗರ ಸಭಾ ಸದಸ್ಯನ ವಿರುದ್ದ ಪ್ರತಿಭಟನೆ

ಕೋಲಾರ ನಗರದ ನಗರ ಸಭಾ ಸದಸ್ಯ ಅಂಬರೀಷ್ ಎಂಬ ಅವಿವೇಕಿ ಭಾರತ ರತ್ನ, ಧೀನ ದಲಿತರ ನಾಯಕ, ಸಮಾನತೆಯ ಹರಿಕಾರ, ಸಂವಿಧಾನ ಶಿಲ್ಪಿ, ಬಾಬಾ ಸಾಹೇಬ್ ಅಂಬೇಡ್ಕರ್ ರವರಿಗೆ ದಿಕ್ಕಾರವನ್ನು ಕೂಗಿರುವುದು ಅಕ್ಷಮ್ಯ ಅಪರಾದವಾಗಿದೆ.

ಒಬ್ಬ ಚುನಾಯಿತಾ ಪ್ರತಿನಿಧಿ ತನ್ನ ಜವಾಬ್ದಾರಿಯನ್ನು ಮರೆತು ಈ ರೀತಿ ವರ್ತಿಸಿರುವುದನ್ನು ಖಂಡಿಸುತ್ತಾ ಕರ್ನಾಟಕ ದಲಿತ ಸಂಘರ್ಷ ಸಮಿತಿ ಮಂಡ್ಯ ಜಿಲ್ಲಾ ಸಮಿತಿಯು ದಿನಾಂಕ:12-12-2022 ರ ಸೋಮವಾರ ಬೆಳಿಗ್ಗೆ 11ಕ್ಕೆ ಮಂಡ್ಯ ನಗರದ ಜಿಲ್ಲಾಧಿಕಾರಿ ಕಛೇರಿ ಬಳಿ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ.

ಎಲ್ಲಾ ತಾಲ್ಲೂಕು ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆ ಯಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷರಾದ ವೆಂಕಟಗಿರಿಯಯ್ಯ ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!