ದೀಪಂಕರ್ ದತ್ತಾ ಅವರು ಭಾರತದ ಸರ್ವೋಚ್ಚ ನ್ಯಾಯಾಧೀಶರಾಗಿ ಪ್ರಮಾಣವಚನ ಸ್ವಿಕರಿಸಿದ್ದಾರೆ. 1965 ರಲ್ಲಿ ಕೊಲ್ಕತ್ತಾ ಹೈಕೋರ್ಟ್ನ ನಿವೃತ್ತ ನ್ಯಾಯಾಧೀಶರಾಗಿದ್ದ ನ್ಯಾಸಲೀಲ್ ದತ್ತಾ ಅವರ ಪುತ್ರ ದೀಪಂಕರ್ ದತ್ತಾ ಅವರು 1989 ರಲ್ಲಿ ಕಲ್ಕತ್ತಾ ವಿಶ್ವವಿದ್ಯಾಲಯದಿಂದ ಎಲ್ಎಲ್ಬಿ ಪಡೆದು ವಕೀಲರಾಗಿ ಸೇರಿಕೊಂಡರು.
ಸಂವಿಧಾನಿಕ ಮತ್ತು ಸಿವಿಲ್ ವಿಷಯಗಳಲ್ಲಿ ಪ್ರಾಥಮಿಕವಾಗಿ ಸರ್ವೋಚ್ಚ ನ್ಯಾಯಾಲಯ ಹಾಗೂ ಹೈಕೋರ್ಟ್ಗಳಲ್ಲಿ ಅಭ್ಯಾಸ ಮಾಡಿ 2006 ರಲ್ಲಿ ಕೊಲ್ಕತ್ತಾ ಹೈಕೋರ್ಟ್ನ ಖಾಯಂ ನ್ಯಾಯಾಧೀಶರಾಗಿದ್ದರು.
ಇದೀಗ ಭಾರತದ ಸರ್ವೋಚ ನ್ಯಾಯಾಲಯದ ನ್ಯಾಯಾಧೀಶರಾಗಿ ಪ್ರಮಾಣ ವಚನ ಸ್ವೀಕರಿಸಿ, ಉನ್ನತ ನ್ಯಾಯಾಲಯದ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಲಿದ್ದಾರೆ.