ಮಂಡ್ಯ ವಿಧಾನಸಭಾ ಕ್ಷೇತ್ರದ ಕಸಬಾ ಹೋಬಳಿಯ ಹನಕೆರೆ ಗ್ರಾಮದ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಸ್ಥಾನ ಜೀರ್ಣೋದ್ಧಾರ ಸಮಿತಿಗೆ ಮನ್ ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ತಮ್ಮ ಶ್ರೀ ಶಂಭು ಸೇವಾ ಟ್ರಸ್ಟ್ ವತಿಯಿಂದ 1ಲಕ್ಷ ರೂ.ಸಹಾಯಧನ ನೀಡಿದ್ದಾರೆ.
ಹನಕೆರೆ ಗ್ರಾಮಸ್ಥರ ಕೋರಿಕೆಯ ಮೇರೆಗೆ ಮನ್ಮುಲ್ ಅಧ್ಯಕ್ಷ ಬಿ.ಆರ್.ರಾಮಚಂದ್ರು ಅವರ ಸಹೋದರ ಬಿ.ಆರ್ ಸುರೇಶ್ ಅವರು ದೇವಸ್ಥಾನಕ್ಕೆ ಬಂದು ₹ 1 ಲಕ್ಷವನ್ನು ದೇಣಿಗೆಯಾಗಿ ನೀಡಿದರು.
ನಮ್ಮ ಟ್ರಸ್ಟ್ ಮೂಲಕ ಹಲವು ದೇವಾಲಯಗಳ ಜೀರ್ಣೋದ್ಧಾರಕ್ಕೆ ನೆರವು ನೀಡಲಾಗಿದೆ. ಅದರಂತೆ ಇಂದು ಹನಕೆರೆಯ ಕಾಲಭೈರವೇಶ್ವರ ದೇವಾಲಯಕ್ಕೆ ಹಣ ನೀಡಲಾಗಿದೆ ಹೇಳಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯಿತಿ ಮಾಜಿ ಸದಸ್ಯರಾದ ಕಿರಣ್, ಅಶ್ವಥ್, ಮಾದಯ್ಯ, ನಾಗರಾಜು, ಮೋಹನ್ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.