ಭಾರತೀಯ ಜನತಾ ಪಾರ್ಟಿಯ ಜನ ಸಂಕಲ್ಪ ಯಾತ್ರೆಯನ್ನು ಪಾಂಡವಪುರ ಪಟ್ಟಣದ ಪಾಂಡವ ಕ್ರೀಡಾಂಗಣದಲ್ಲಿ ಡಿ16 ರಂದು ಬೆಳಿಗ್ಗೆ 10.30 ಕ್ಕೆ ಮೇಲುಕೋಟೆ ವಿಧಾನ ಸಭಾ ಕ್ಷೇತ್ರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಮುಖಂಡ ಸುಂಡಹಳ್ಳಿ ಸೋಮಶೇಖರ್ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಆಯೋಜಿಸಲಾಗಿದ್ದು, ಮೇಲುಕೋಟೆ ಕ್ಷೇತ್ರದ ಬಿ.ಜೆ.ಪಿ ಕಾರ್ಯಕರ್ತರು, ಯಡಿಯೂರಪ್ಪ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿವಂತೆ ಮನವಿ ಮಾಡಿದರು.
ಕಳೆದ ಎಂಟು ವರ್ಷಗಳಿಂದ ಕ್ಷೇತ್ರದ ಅಭಿವೃದ್ಧಿಗೆ ಅಂದಿನ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಅವರ ಮಂತ್ರಿ ಮಂಡಲ ಹಾಗೂ ಇಂದಿನ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಅವರ ಆಡಳಿತ ಅವಧಿಯಲ್ಲಿ ಸಾಕಷ್ಟು ಅನುದಾನವನ್ನು ಬಿಡುಗಡೆ ಮಾಡಿ ಅಭಿವೃದ್ಧಿಗೆ ಒತ್ತು ನೀಡಿದ್ದಾರೆ ಎಂದರು. ಗೋಷ್ಠಿಯಲ್ಲಿ ಉಮೇಶ್ ಉಪಸ್ಥಿತರಿದ್ದರು.