Thursday, September 19, 2024

ಪ್ರಾಯೋಗಿಕ ಆವೃತ್ತಿ

ಅವಕಾಶ ನೀಡಿದರೆ ಜನಸೇವೆಗೆ ಸಿದ್ಧ: ಎಚ್.ಎನ್.ಯೋಗೇಶ್

ಶಾಸಕರಾದ ಎಂ.ಶ್ರೀನಿವಾಸ್ ಅವರ ಕೆಲಸವನ್ನು ಮೆಚ್ಚಿ ಕ್ಷೇತ್ರದ ಮತದಾರರು ಮೂರು ಬಾರಿ ಅವರನ್ನು ಆಯ್ಕೆ ಮಾಡಿದ್ದಾರೆ. ಅವರ ಮೇಲಿಟ್ಟಿರುವ ಅಭಿಮಾನ, ವಿಶ್ವಾಸವನ್ನು ನನಗೂ ನೀಡಿದರೆ ಜನಸೇವೆ ಮಾಡಲು ಸಿದ್ಧನಿದ್ದು, ನನಗೊಂದು ಅವಕಾಶ ನೀಡುವಂತೆ ಜಿ.ಪಂ.ಮಾಜಿ ಸದಸ್ಯ ಎಚ್.ಎನ್.ಯೋಗೇಶ್ ಮನವಿ ಮಾಡಿದರು.

ಮಂಡ್ಯ ತಾಲೂಕಿನ ಬೂದನೂರು ಗ್ರಾಮದ ಖಾಸಗಿ ಹೋಟೆಲ್‌ನಲ್ಲಿ ನಡೆದ ತಮ್ಮ ಜನ್ಮದಿನ ಸಮಾರಂಭದಲ್ಲಿ ಅಭಿಮಾನಿಗಳು ಹಾಗೂ ಜೆಡಿಎಸ್ ಕಾರ್ಯಕರ್ತರಿಂದ ಅಭಿಮಾನದ ಶುಭಾಶಯ ಸ್ವೀಕರಿಸಿ ಅವರು ಮಾತನಾಡಿದರು.

nudikarnataka.com

ಜಿ.ಪಂ.ಸದಸ್ಯನಾಗಿ,ಸ್ಥಾಯಿ ಸಮಿತಿ ಸದಸ್ಯನಾಗಿ ಕಾರ್ಯನಿರ್ವಹಿಸಿರುವ ನನಗೆ ಮಂಡ್ಯ ವಿಧಾನಸಭಾ ಕ್ಷೇತ್ರದ ಜನರು ಅವಕಾಶ ನೀಡಿದರೆ ಅವರ ಸೇವೆಗೆ ಸಿದ್ಧನಾಗಿದ್ದೇನೆ.ನನ್ನ ಜನ್ಮದಿನವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳಲು ರಕ್ತದಾನ ಶಿಬಿರ, ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡುತ್ತಿದ್ದೇನೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ನೂರಾರು ಅಭಿಮಾನಿಗಳು ಹಾಗೂ ಕಾರ್ಯಕರ್ತರು ಯೋಗೇಶ್ ಅವರ ಜನ್ಮದಿನವನ್ನು ವಿಜೃಂಭಣೆಯಿಂದ ಆಚರಿಸಿದರು.

ನಗರಸಭೆ ಜೆಡಿಎಸ್ ಸದಸ್ಯರು, ಶಾಸಕ ಎಂ.ಶ್ರೀನಿವಾಸ್ ಬೆಂಬಲಿಗರು, ಕಾರ್ಯಕರ್ತರು, ಅಭಿಮಾನಿ ಗಳು ಕೇಕ್ ಕತ್ತರಿಸಿ ತಿನ್ನಿಸುವುದರೊಂದಿಗೆ ಭಾರೀ ಗಾತ್ರದ ಹೂವಿನ ಹಾರ ಹಾಕಿ ಅಭಿನಂದಿಸಿದರು.

ಹುಟ್ಟುಹಬ್ಬದ ಅಂಗವಾಗಿ ಜೀವಧಾರೆ ಟ್ರಸ್ಟ್ ಅಧ್ಯಕ್ಷ ನಟರಾಜು ನೇತೃತ್ವದಲ್ಲಿ ರಕ್ತದಾನ ಶಿಬಿರ ಆಯೋಜಿಸ ಲಾಗಿತ್ತು. ಹೆಚ್.ಎನ್. ಯೋಗೇಶ್ ಅವರು ರಕ್ತದಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಆಟೋ ಚಾಲಕರಿಗೆ ಸಮವಸ್ತ್ರ ವಿತರಣೆ ಮಾಡಲಾಯಿತು. ಹುಟ್ಟುಹಬ್ಬ ಕಾರ್ಯಕ್ರಮಕ್ಕೆ ಆಗಮಿಸಿದ್ದ ಎಲ್ಲ ಜನರಿಗೂ ಸಸ್ಯಾಹಾರಿ ಮತ್ತು ಮಾಂಸಾಹಾರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು. ಶಾಸಕ ಎಂ.ಶ್ರೀನಿವಾಸ್ ಕೂಡ ಕಾರ್ಯಕ್ರಮದಲ್ಲಿ ಹಾಜರಿದ್ದು ಸಮಾರಂಭಕ್ಕೆ ಆಗಮಿಸಿದವರಿಗೆ ಕೃತಜ್ಞತೆ ಸಲ್ಲಿಸಿದರು.

ಶಾಸಕ ಎಂ.ಶ್ರೀನಿವಾಸ್, ನಗರಸಭೆ ಅಧ್ಯಕ್ಷ ಹೆಚ್.ಎಸ್.ಮಂಜು, ತಾಲೂಕು ಅಧ್ಯಕ್ಷ ತಿಮ್ಮೇಗೌಡ,ಮನ್ಮುಲ್ ಉಪಾಧ್ಯಕ್ಷ ರಘುನಂದನ್, ಮಾರಗೌಡನಹಳ್ಳಿ ಗ್ರಾ.ಪಂ. ಮಾಜಿ ಅಧ್ಯಕ್ಷ ವಸಂತರಾಜು, ನಗರಸಭಾ ಸದಸ್ಯರಾದ ನಾಗೇಶ್, ನಾರಾಯಣ್, ರಜಿನಿ, ಗ್ರಾ.ಪಂ. ಮಾಜಿ ಸದಸ್ಯ ರಘು ಇನ್ನಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!