ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ನೀಡಿರುವ ಅವಹೇಳನಕಾರಿ ಹೇಳಿಕೆ ಖಂಡಿಸಿ ತಾಲ್ಲೂಕು ಬಿಜೆಪಿ ಘಟಕದ ವತಿಯಿಂದ ಪ್ರತಿಭಟನೆ ನಡೆಸಯಿತು.
ಮಳವಳ್ಳಿ ಪಟ್ಟಣದ ಮುಖ್ಯರಸ್ತೆಗಳಲ್ಲಿ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ಮೆರವಣಿಗೆ ನಡೆಸಿ ಪಾಕಿಸ್ತಾನದ ವಿರುದ್ದ ಘೋಷಣೆಗಳನ್ನು ಕೂಗಿ ಅನಂತ್ರಾಂ ವೃತ್ತದ ಆವರಣದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಮಂಡಲ ಅಧ್ಯಕ್ಷ ಎಂಎನ್ ಕೃಷ್ಣ ಮಾತನಾಡಿ, ಪ್ರಧಾನಿ ನರೇಂದ್ರಮೋದಿ ಅವರನ್ನು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ನೀಡಿರುವ ಹೇಳಿಕೆಯನ್ನು ಖಂಡಿಸುತ್ತೇವೆ, ವಿಶ್ವವೇ ಪ್ರಧಾನಿ ಅವರ ಜನಪರ ಆಢಳಿತವನ್ನು ಮೆಚ್ಚಿ ಪ್ರಶಂಸೆ ವ್ಯಕ್ತಪಡಿಸುತ್ತಿರುವ ಪ್ರಸ್ತುತ ಸಂದರ್ಭದಲ್ಲಿ ಪಾಕಿಸ್ತಾನ ಸಲ್ಲದ ಹೇಳಿಕೆಯನ್ನು ನೀಡುವುದರ ಮೂಲಕ ತಮ್ಮ ಚಾಲಿಯನ್ನು ಮುಂದುವರಿಸಿದೆ ಎಂದರು.
ಬಿಜೆಪಿ ಮುಖಂಡ ಮುನಿರಾಜು ಮಾತನಾಡಿ, ಭಯೋತ್ಪಾದಕರ ತವರು ಕೇಂದ್ರ ಪಾಕಿಸ್ತಾನ ಆಗಿದ್ದು, ವಿಶ್ವಗುರು ಪ್ರಧಾನಿ ನರೇಂದ್ರಮೋದಿ ವಿರುದ್ದ ಅವಹೇಳನಕಾರಿಯಾಗಿ ಹೇಳಿಕೆ ನೀಡಿರುವುದು ಅವರ ನೀಚ ಮನಸ್ಥಿತಿಯನ್ನು ತೋರುತ್ತದೆ, ಮುಸ್ಲಿಂ ಮತದಾರರ ಒಲೈಕೆಗಾಗಿ ಕುಕ್ಕರ್ನಲ್ಲಿ ಬಾಂಬ್ ಸಿಡಿಸಲು ಹೋದ ಪರವಾಗಿ ಕಾಂಗ್ರೆಸ್ ಮಾತನಾಡುತ್ತಿದೆ, ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಬಿಜೆಪಿ ಹಿರಿಯ ಮುಖಂಡರ ವಿರುದ್ದ ಅವಹೇಳನಕಾರಿಯಾಗಿ ಮಾತನಾಡಿರುವುದು ಖಂಡನೀಯ ಕೂಡಲೇ ಕ್ಷೆಮೆಯಾಚಿಸಬೇಕೆಂದು ಒತ್ತಾಯಿಸಿದರು.
ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಮಾತನಾಡಿ, ವಿಶ್ವಗುರು ಎನಿಸಿಕೊಂಡಿರುವ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೊ ನೀಡಿರುವ ಹೇಳಿಕೆಯನ್ನು ಬಿಜೆಪಿ ಪಕ್ಷ ತೀವ್ರವಾಗಿ ಖಂಡಿಸುತ್ತದೆ, ಕೂಡಲೇ ಪಾಕಿಸ್ತಾನ ವಿದೇಶಾಂಗ ಸಚಿರ ಕ್ಷೆಮೆಯಾಚಿಸಬೇಕು, ಕುಕ್ಕರ್ ಬಾಂಬ್ ಸಂಬಂಧ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಭಯೋತ್ಪಾದನೆಗೆ ಕುಮ್ಮಕ್ಕು ನೀಡುವ ಹೇಳಿಕೆ ನೀಡಿದ್ದಾರೆ, ಕೂಡಲೇ ಡಿಕೆಶಿ ಕ್ಷೆಮೆ ಯಾಚಿಸಬೇಕೆಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಉಪಾಧ್ಯಕ್ಷ ಮಧುಗಂಗಾಧರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜು, ಕುಮಾರಸ್ವಾಮಿ. ಶಿವಲಿಂಗೇಗೌಡ, ಕಪಿನಿಗೌಡ, ಅಶೋಕ್ಕುಮಾರ್, ಅಶೋಕ್, ದೇವರಾಜು, ರಾಜೀವ್ ಕೆಸಿನಾಗೇಗೌಡ, ವೇದವತಿ, ಹನುಮಂತು, ಗಿರೀಶ್, ನಾಗೇಶ್,ಶಿವಲಿಂಗಸ್ವಾಮಿ,ಕಾಂತರಾಜು ಸೇರಿದಂತೆ ಇತರರು ಇದ್ದರು.