Thursday, September 19, 2024

ಪ್ರಾಯೋಗಿಕ ಆವೃತ್ತಿ

ಶೀಘ್ರದಲ್ಲೇ ಅಶೋಕ್ ಜಯರಾಂ ಜೆಡಿಎಸ್ ಸೇರಲಿದ್ದಾರೆ : ಸಿ.ಎಸ್.ಪುಟ್ಟರಾಜು

ಕಳೆದ ಬಾರಿಯ ಚುನಾವಣೆಯಲ್ಲಿ ಕೆಲ ತಾಂತ್ರಿಕ ಕಾರಣಗಳಿಂದ ಟಿಕೆಟ್ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಸೇರಿರುವ ಎಸ್.ಡಿ.ಜಯರಾಂ ಅವರ ಪುತ್ರ ಅಶೋಕ್ ಜಯರಾಂ ಅವರು ಅವರಿಗೆ ತಮ್ಮ ತಪ್ಪಿನ ಅರಿವಾಗಿ ಶೀಘ್ರದಲ್ಲೇ ಜೆಡಿಎಸ್ ಸೇರಲಿದ್ದಾರೆ ಎಂದು ಶಾಸಕ ಸಿ.ಎಸ್. ಪುಟ್ಟರಾಜು ಹೇಳಿದರು.

ಮಂಡ್ಯ ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಲ್ಲಿ ಪಂಚರತ್ನಯಾತ್ರೆ ಅಂಗವಾಗಿ ನಡೆದ ಬಹಿರಂಗ ಸಭೆಯಲ್ಲಿ ಮಾತನಾಡಿದ ಅವರು, ಜಾ.ದಳದಲ್ಲೇ ಇದ್ದ ಅಶೋಕ್ ಜಯರಾಂ  ಇಂದು ನಮ್ಮ ಪಕ್ಷದ ವಿರುದ್ಧವೇ ಮಾತನಾಡುವಷ್ಟರ ಮಟ್ಟಿಗೆ ಬೆಳೆದಿದ್ದಾರೆ. ಶೀಘ್ರದಲೇ ಅವರಿಗೆ ತಮ್ಮ ತಪ್ಪಿನ ಅರಿವು ಆಗಲಿದೆ ಎಂದರು.

ಪಂಚರತ್ನಯಾತ್ರೆಗೆ ಎಲ್ಲೆಡೆ ಅಭೂತಪೂರ್ವ ಬೆಂಬಲ ದೊರಕುತ್ತಿದ್ದು, 2023 ರಲ್ಲಿ ಕುಮಾರಸ್ವಾಮಿ ಮುಖ್ಯಮಂತ್ರಿಯಾಗುವ ಮೂಲಕ ಪಂಚರತ್ನಯಾತ್ರೆ ಕಾರ್ಯಕ್ರಮಗಳನ್ನು ಜಾರಿಗೆ ತರಲಿದ್ದಾರೆ ಎಂದು ತಿಳಿಸಿದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!