ಮಳವಳ್ಳಿ ಪಟ್ಟಣದ ಪ್ರವಾಸಿ ಮಂದಿರದ ಬಳಿ ಶನಿವಾರ ಚಿರತೆ ಪ್ರತ್ಯಕ್ಷಗೊಂಡಿದ್ದು, ಪಟ್ಟಣದ ಜನರು ಭಯಭೀತರನ್ನಾಗಿ ಮಾಡಿದೆ.
ಹಾಡಹಗಲೇ ಚಿರತೆ ಕಾಣಿಸಿಕೊಂಡಿರುವುದು ಸ್ಥಳೀಯ ನಾಗರೀಕರಲ್ಲಿ ಆತಂಕವನ್ನುಂಟು ಮಾಡಿದೆ. ಚಿರತೆ ಕಾಣಿಸಿಕೊಂಡಿರುವ ಬಗ್ಗೆ ಸಾರ್ವಜನಿಕರು ಅರಣ್ಯ ಇಲಾಖೆಗೆ ದೂರು ನೀಡಿದ ಹಿನ್ನಲೆಯಲ್ಲಿ ಸ್ಥಳಕ್ಕೆ ಧಾವಿಸಿದ ಅರಣ್ಯ ಇಲಾಖೆ ಸಿಬ್ಬಂದಿಗಳು, ಪರಿಶೀಲನೆ ನಡೆಸಿದರು.
ಈ ವೇಳೆ ಅರಣ್ಯ ಸಿಬ್ಬಂದಿ ಸೌಮ್ಯ ಮಾತನಾಡಿ, ಸಿಸಿ ಟಿವಿ ಆಳವಡಿಸಲಾಗುವುದು, ನಂತರ ಬೋನು ಇಟ್ಟು ಸೆರೆಹಿಡಿಯುವುದಾಗಿ ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿ ಕಾಣಿಸಿಕೊಳ್ಳುತ್ತಿದ್ದ ಚಿರತೆ ಈಗ ಪಟ್ಟಣದಲ್ಲೂ ಕಾಣಿಸಿಕೊಂಡಿದ್ದು ಜನರು ಭಯಬೀತರಾಗಿದ್ದಾರೆ.
10ನೇ ವಾರ್ಡಿನ ಪುರಸಭೆ ಸದಸ್ಯ ನಂದಕುಮಾರ್ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ಪರಿಶೀಲನೆ ನಡೆಸಿ, ಕೂಡಲೇ ಚಿರತೆಯನ್ನು ಸೆರೆ ಹಿಡಿಯಸುವಂತೆ ಒತ್ತಾಯಿಸಿದರು.