ಪ್ರಧಾನಿ ನರೇಂದ್ರಮೋದಿ ಬಗ್ಗೆ ಪಾಕಿಸ್ತಾನದ ವಿದೇಶಾಂಗ ಸಚಿವ ಬಿಲಾವಲ್ ಭುಟ್ಟೋ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಖಂಡಿಸಿ ನಾಗಮಂಗಲದಲ್ಲಿ ಬಿಜೆಪಿ ಮುಖಂಡ ಫೈಟರ್ ರವಿ (ಮಲ್ಲಿಕಾರ್ಜುನ್) ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.
ನಾಗಮಂಗಲ ಪಟ್ಟಣದ ಮಿನಿ ವಿಧಾನಸೌಧದ ಮುಂಭಾಗದಲ್ಲಿ ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಪಾಕಿಸ್ತಾನ ಕೆಲವೇ ದಿನಗಳಲ್ಲಿ ಸರ್ವನಾಶವಾಗುವ ಅಂಚಿನಲ್ಲಿದೆ, ಅವರ ಸರ್ವನಾಶಕ್ಕೆ ಅವರೇ ಗುಂಡಿ ತೋಡಿಕೊಳ್ಳುತ್ತಿದ್ದಾರೆ, ಪ್ರಪಂಚದಲ್ಲಿಯೇ ಭಯೋತ್ಪಾದನೆಯ ತವರಾಗಿರುವ ಪಾಕಿಸ್ತಾನ ತಮ್ಮೊಳಗೆ ಬಡಿದಾಡಿಕೊಂಡು ಸ್ಮಶಾನ ಸೃಷ್ಠಿಸಿಕೊಳ್ಳುತ್ತಿರುವಾಗ ಭಯೋತ್ಪಾದನೆಯನ್ನು ಬುಡಸಮೇತ ಕೀಳಲು ಹೊರಟಿರುವ ಭಾರತದ ಬಗ್ಗೆ ಮಾತನಾಡಿರುವುದು ಹಾಸ್ಯಾಸ್ಪದವಾಗಿದೆ ಎಂದರು.
ಬಿಜೆಪಿ ಪಕ್ಷದ ಕಚೇರಿಯಿಂದ ಮಿನಿ ವಿಧಾನಸೌಧದವರಗೆ ಪ್ರಮುಖ ರಸ್ತೆಗಳಲ್ಲಿ ಪ್ರತಿಭಟನಾ ರ್ಯಾಲಿ ಭಾಗವಹಿಸಿದ ಕಾರ್ಯಕರ್ತರು ಪಾಕಿಸ್ತಾನದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲ್ಲೂಕು ಅಧ್ಯಕ್ಷ ಸೋಮಶೇಖರ್, ಧರಣೇಂದ್ರ ಬಾಬು, ಅರ್ಜುನ್, ಡಿ.ದಾಸಪ್ಪ, ಪ್ರವೀಣ್, ಪರಮೇಶ್ ಹಲವರು ಹಾಜರಿದ್ದರು.