ಮಂಡ್ಯ ಜಿಲ್ಲಾಡಳಿತ ಮತ್ತು ವಿಶ್ವಕರ್ಮ ಮುಖಾಂಡರ ಸಹಯೋಗದೊಂದಿಗೆ ಜ.1ರಂದು ಮಧ್ಯಾಹ್ನ 2 ಗಂಟೆಗೆ ಕಲಾಮಂದಿರದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣ ದಿನಾಚರಣೆಯನ್ನು ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಹೆಚ್.ಎಲ್.ನಾಗರಾಜು ತಿಳಿಸಿದರು.
ಮಂಡ್ಯ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಕರಣ ದಿನಾಚರಣೆಯ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಕಣಾಚಾರಿ ಅವರ ಭಾವಚಿತ್ರಕ್ಕೆ ಹೂವಿನ ಅಲಂಕಾರ ಮಾಡಬೇಕು. ಕಾರ್ಯಕ್ರಮದಲ್ಲಿ ಬ್ಯಾನರ್ ವ್ಯವಸ್ಥೆ ಹಾಗೂ ಆಹ್ವಾನ ಪತ್ರಿಕೆಗಳನ್ನ ಮಾಡಿಸಬೇಕು. ಕಾರ್ಯಕ್ರಮವನ್ನು ಕುರಿತು ಉಪನ್ಯಾಸ ನೀಡಲು ಉಪನ್ಯಾಸಕರನ್ನು ಆಹ್ವಾನಿಸಬೇಕು. ಜಿಲ್ಲೆಯಲ್ಲಿ ಅಮರಶಿಲ್ಪಿ ಜಕಣಾಚಾರಿ ದಿನಾಚರಣೆ ಕಾರ್ಯಕ್ರಮಕ್ಕೆ ಸಚಿವರು ಹಾಗೂ ಶಾಸಕರನ್ನು ಸ್ವತಃ ಅಧಿಕಾರಿಗಳು ಖುದ್ದಾಗಿ ಭೇಟಿ ಮಾಡಿ ಆಹ್ವಾನ ಪತ್ರಿಕೆಯನ್ನು ನೀಡಬೇಕೆಂದು ಸೂಚನೆ ನೀಡಿದರು.
ಕಾರ್ಯಕ್ರಮದಲ್ಲಿ ಯಾವುದೇ ಲೋಪ ಉಂಟಾಗದ ರೀತಿ, ವಹಿಸಿರುವ ಕೆಲಸಗಳ ನಿರ್ವಹಣೆ ಮಾಡಬೇಕು. ವಿಶ್ವಕರ್ಮ ಮುಖಾಂಡರೆಲ್ಲರು ಕೈಜೋಡಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಎನ್.ಉದಯಕುಮಾರ್, ಜಿ. ಪಂ.ಸಹಾಯಕ ಕಾರ್ಯದರ್ಶಿ ಸುಬ್ರಹ್ಮಣ್ಯ, ವಿಶ್ವಕರ್ಮ ಸಮಾಜದ ಜಿಲ್ಲಾಧ್ಯಕ್ಷ ತಿರುಮಲಚಾರಿ, ನಗರಸಭೆಯ ಸಹಾಯಕ ಅಭಿಯಂತರ ರುದ್ರೆಗೌಡ, ನಗರಸಭಾ ಸದಸ್ಯ ಆನಂದ್, ಉಪ ತಹಶೀಲ್ದಾರ್ ವಸಂತ್ ಕುಮಾರ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.