Friday, September 20, 2024

ಪ್ರಾಯೋಗಿಕ ಆವೃತ್ತಿ

ಬಿಜೆಪಿ ಸಮಾವೇಶ ಯಶಸ್ವಿಗೊಳಿಸಲು ಮನವಿ

ಮಂಡ್ಯ ನಗರಕ್ಕೆ ಡಿ.30ರಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಆಗಮಿಸುತ್ತಿದ್ದು, ಬಿಜೆಪಿ ಕಾರ್ಯಕರ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಬಿಜೆಪಿ ಮುಖಂಡ ಮುನಿರಾಜು ತಿಳಿಸಿದರು.

ಮಂಡ್ಯದಲ್ಲಿ ನಡೆಯಲಿರುವ ಬೃಹತ್ ಸಮಾವೇಶದ ಪೂರ್ವಭಾವಿಯಾಗಿ ತಾಲ್ಲೂಕಿನ ಚಿಕ್ಕಮೂಲಗೂಡು ಗ್ರಾಮದಲ್ಲಿ ನಡೆದ ಸಭೆಯಲ್ಲಿ ಮಾತನಾಡಿದ ಅವರು, ಮಂಡ್ಯದ ಬಾಲಕರ ಕಾಲೇಜು ಮೈದಾನದಲ್ಲಿ ನಡೆಯಲಿರುವ ಬೃಹತ್ ಸಮಾವೇಶಕ್ಕೆ ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸೇರಿಸುವ ಉದ್ದೇಶ ಹೊಂದಲಾಗಿದ್ದು, ಮಳವಳ್ಳಿಯಿಂದ ಸುಮಾರು 20 ಸಾವಿರಕ್ಕೂ ಹೆಚ್ಚು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆಂದು ಹೇಳಿದರು.

ಹಿರಿಯ ಬಿಜೆಪಿ ಮುಖಂಡ ಯಮದೂರು ಸಿದ್ದರಾಜು ಮಾತನಾಡಿ, ಬಿಜೆಪಿಯ ರಾಜಕೀಯ ಚಾಣಾಕ್ಷ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಡಿ.30ರಂದು ಸಕ್ಕರೆ ನಾಡು ಮಂಡ್ಯ ಜಿಲ್ಲೆಗೆ ಆಗಮಿಸುತ್ತಿದ್ದಾರೆ, ಹಳೆ ಮೈಸೂರು ಭಾಗದಲ್ಲಿ ಬಿಜೆಪಿ ಪಕ್ಷಕ್ಕೆ ಶಕ್ತಿ ತಂಬಲು ಬರುತ್ತಿದ್ದಾರೆ, ಈಗಗಲೇ ಯಾವಾವ ಕ್ಷೇತ್ರಗಳನ್ನು ಗೆಲ್ಲಿಸಲೇ ಬೇಕೆಂದು ಗುರುತು ಮಾಡಿಕೊಂಡಿದ್ದು, ಅದರಲ್ಲಿ ಮಳವಳ್ಳಿಯೂ ಸೇರಿದೆ, 30ರಂದು ಮಳವಳ್ಳಿ ತಾಲ್ಲೂಕಿನಿಂದ 20 ಸಾವಿರಕ್ಕೂ ಹೆಚ್ಚು ಮಂದಿಯನ್ನು ಜನಸಂಕಲ್ಪಯಾತ್ರೆಗೆ ಹೋಗಲಾಗುತ್ತಿದೆ.

ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ರಾಜ್ಯಾಧ್ಯಕ್ಷ ಕಟೀಲ್ ಸೇರಿದಂತೆ ಮಂಡ್ಯ ಮೈಸೂರು ಭಾಗದ ಮುಖಂಡರು ಭಾಗವಹಿಸಲಿದ್ದಾರೆಂದು ಹೇಳಿದರು.

ಸಭೆಯಲ್ಲಿ ಮಂಡಲ ಅಧ್ಯಕ್ಷ ಎಂ ಎನ್‌ ಕೃಷ್ಣ, ರೈತ ಮೊರ್ಚಾ ತಾಲ್ಲೂಕು ಅಧ್ಯಕ್ಷ ದೇವರಾಜು, ಪ್ರಧಾನ ಕಾರ್ಯದರ್ಶಿ ಕೆ.ಸಿ ನಾಗೇಗೌಡ, ಮುಖಂಡರಾದ ಚಿಕ್ಕಣ್ಣ, ಶಶಿಕುಮಾರ್ ಸೇರಿದಂತೆ ಇತರರು ಇದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!