ಮೈಸೂರಿನ ಕಡಗೋಳದ ಬಳಿ ನಡೆದ ಕಾರು ಅಪಘಾತದಲ್ಲಿ ಪ್ರಧಾನ ಮಂತ್ರಿ ನರೇಂದ್ರಮೋದಿಯವರ ಸಹೋದರ ಪ್ರಹ್ಲಾದ್ ಮೋದಿ ಹಾಗೂ ಕುಟುಂಬಸ್ಥರನ್ನು ಗಾಯಗೊಂಡಿದ್ದಾರೆ.
ಅವರನ್ನು ಮೈಸೂರಿನ ಜೆಎಸ್ಎಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಆಸ್ಪತ್ರೆಗೆ ಭೇಟಿ ನೀಡಿ ಪ್ರಹ್ಲಾದ್ ಮೋದಿ ಅವರ ಆರೋಗ್ಯ ವಿಚಾರಿಸಿದರು.
ಅಪಘಾತದಲ್ಲಿ ಪ್ರಹ್ಲಾದ್ ಮೋದಿಯವರು ಹಾಗೂ ಕುಟುಂಬಸ್ಥರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಯಾವುದೇ ರೀತಿಯ ಅಪಾಯವಾಗಿಲ್ಲ. ವೈದ್ಯರಿಂದ ಮಾಹಿತಿ ಪಡೆದ ಸಚಿವರು, ಶೀಘ್ರವಾಗಿ ಗುಣಮುಖರಾಗಲಿ ಎಂದು ಹಾರೈಸಿದರು.