ವರದಿ : ನ.ಲಿ.ಕೃಷ್ಣ
ಮದ್ದೂರು ತಾಲ್ಲೂಕಿನ ಚಿಕ್ಕರಸಿನಕೆರೆ ಬಳಿ ಕಾಣಿಸಿಕೊಂಡಿರುವ ಒಂಟಿ ಸಲಗವನ್ನು ಸೆರೆ ಹಿಡಿಯಲು ಅರಣ್ಯ ಇಲಾಖೆಯು ಕಾರ್ಯಾಚರಣೆ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಸಾರ್ವಜನಿಕರು ಗದ್ದೆ-ನದಿ ದಂಡೆಗೆ ಹೋಗದಂತೆ ಅರಣ್ಯ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಚಿಕ್ಕರಸಿನಕೆರೆ ಮತ್ತು ಕಸಬಾ ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿ ಆನೆ (ಒಂಟಿ ಸಲಗ) ಕಾಣಿಸಿಕೊಂಡಿರುವುದರಿಂದ ನಗರಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲಾ ಗ್ರಾಮಸ್ಥರು ಶನಿವಾರ ಸಾಯಂಕಾಲ 5 ಗಂಟೆಯಿಂದ ನಾಳೆ (ಭಾನುವಾರ) ಬೆಳಗ್ಗೆ 10 ಗಂಟೆವರೆಗೆ ಮುಂಜಾಗ್ರತೆಯಿಂದ ಇರಬೇಕೆಂದು ಸೂಚನೆ ನೀಡಲಾಗಿದೆ.
ಸಾರ್ವಜನಿಕರು ಹೊಸ ವರ್ಷದ ಆಚರಣೆ ಪ್ರಯುಕ್ತ ತಮ್ಮ ಜಮೀನುಗಳ ಹತ್ತಿರವಾಗಲಿ, ಗದ್ದೆ ಹತ್ತಿರ ಹಾಗೂ ನದಿ ದಂಡೆಗಳಲ್ಲಿ ಹೋಗುವುದನ್ನು ನಿಷೇಧಿಸಲಾಗಿದ್ದು, ತಮ್ಮ ಮನೆಯಲ್ಲಿ ಸುರಕ್ಷಿತವಾಗಿರಬೇಕೆಂದು ಅರಣ್ಯ ಇಲಾಖೆಯ ಅಧಿಕಾರಿಗಳು ಮನವಿ ಮಾಡಿದ್ದಾರೆ.