ರಾಜ್ಯ ಒಕ್ಕಲಿಗರ ಕೆಂಪೇಗೌಡ ಯುವಶಕ್ತಿ ವೇದಿಕೆ ವತಿಯಿಂದ ಜ.10 ರಂದು ಬೆಳಿಗ್ಗೆ 10.30ಗಂಟೆಗೆ ಮಂಡ್ಯ ನಗರದ ನಾಲ್ವಡಿ ಕೃಷ್ಣರಾಜ ಒಡೆಯರ್ ಕಲಾಮಂದಿರದಲ್ಲಿ ಒಕ್ಕಲಿಗೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳ ಲಾಗಿದೆ ಎಂದು ವೇದಿಕೆಯ ರಾಜ್ಯಾಧ್ಯಕ್ಷ ಅನಿಲ್ ಗೌಡ ತಿಳಿಸಿದರು.
ಮಂಡ್ಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಕಾರ್ಯಕ್ರಮಕ್ಕೆ ರಾಜ್ಯದ 15 ಜಿಲ್ಲೆಗಳಿಂದ ಆಗಮಿಸಲಿದ್ದಾರೆ. ಸಮುದಾಯದ ಸ್ವಾಮೀಜಿಗಳು ಹಾಗೂ ರಾಜಕೀಯ ಪಕ್ಷದ ಮುಖಂಡರು, ಜನಪ್ರತಿನಿಧಿಗಳು ಆಗಮಿಸಲಿದ್ದಾರೆ ಎಂದರು.
ಗೋಷ್ಠಿಯಲ್ಲಿ ಜಿಲ್ಲಾಧ್ಯಕ್ಷ ಪುಟ್ಟಸ್ವಾಮಿಗೌಡ, ಪ್ರಧಾನ ಕಾರ್ಯದರ್ಶಿ ಬೋರೇಗೌಡ, ಉಪಾಧ್ಯಕ್ಷ ತೇಜಸ್ ಗೌಡ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಚಿನಕುರುಳಿ ಪ್ರದೀಪ್, ಮುಖಂಡರಾದ ಮಹೇಶ್ ಹಾಗೂ ಮಂಜನಾಥ್ ಉಪಸ್ಥಿತರಿದ್ದರು.