Thursday, September 19, 2024

ಪ್ರಾಯೋಗಿಕ ಆವೃತ್ತಿ

ನ್ಯಾ.ಎ.ಜೆ.ಸದಾಶಿವ ವರದಿ ವಿರೋಧಿಸಿ ಬೆಂಗಳೂರು ಚಲೋ

ನ್ಯಾ.ಎ.ಜೆ ಸದಾಶಿವ ಆಯೋಗದ ವರದಿ ವಿರೋಧಿಸಿ ಜ.10 ಬೆಂಗಳೂರು ಚಲೋಗೆ ಕರೆ ನೀಡಿದ್ದು, ಸಮುದಾಯ ಹೆಚ್ಚಿನ ಜನರು ಈ ಚಲೋ ಕಾರ್ಯಕ್ರಮದಲ್ಲಿ ಭಾಗವಹಿಸಬೇಕೆಂದು ಚಿತ್ರದುರ್ಗದ ಭೋವಿ ಮಹಾಸಂಸ್ಥಾನ ಮಠದ ಪೀಠಾಧಿಪತಿ ಇಮ್ಮಡಿ ಸಿದ್ದರಾಮೇಶ್ವರ ಸ್ವಾಮೀಜಿ ಹೇಳಿದರು.

ಮಂಡ್ಯ ನಗರದ ಪ್ರವಾಸಿಮಂದಿರದಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟ ರಾಜ್ಯ ಸಮಿತಿ  ಪೂರ್ವಭಾವಿ ಸಭೆ ಅಧ್ಯಕ್ಷತೆ ವಯಿಸಿ ಅವರು ಮಾತನಾಡಿದರು.

ನ್ಯಾ.ಎ.ಜೆ ಸದಾಶಿವ ಆಯೋಗದ ವರದಿಯನ್ನು ಸಾರ್ವಜನಿಕವಾಗಿ ಚರ್ಚಿಸದೇ ಕೇಂದ್ರ ಸರ್ಕಾರಕ್ಕೆ ಏಕಮುಖವಾಗಿ ಶಿಫಾರಸ್ಸು ಮಾಡಲು ಹೊರಟಿರುವುದು ಪ್ರಜಾಪ್ರಭುತ್ವ ವಿರೋಧಿ ಧೋರಣೆಯಾಗಿದೆ ಎಂದರು.

ಸಭೆಯಲ್ಲಿ ಕರ್ನಾಟಕ ಮೀಸಲಾತಿ ಸಂರಕ್ಷಣಾ ಒಕ್ಕೂಟದ  ರಾಜ್ಯಾಧ್ಯಕ್ಷ ಡಾ.ರವಿ ಮಾಕಳಿ, ಕಾರ್ಯಾಧ್ಯಕ್ಷ ರಾಘವೇಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿ ಎನ್. ಅನಂತನಾಯ್ಕ, ಕಿರಣ್ ಕುಮಾರ್ ಕೊತ್ತಗೆರೆ ಮತ್ತಿತರರಿದ್ದರು.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!