ಈ ಸ್ಯಾಂಟ್ರೋ ರವಿಗೆ ಕುಮಾರಕೃಪ ಅತಿಥಿ ಗೃಹದಲ್ಲಿ ತಿಂಗಳುಗಳ ಕಾಲ ವಾಸವಿರುವ ವ್ಯವಸ್ಥೆ ಕಲ್ಪಿಸಿದ್ದು ಯಾರು? ಮುಖ್ಯಮಂತ್ರಿಯವರ ಮನೆಯಿಂದ ಕೂಗಳತೆಯಲ್ಲಿ ಇದು ನಡೆದಿದೆ ಎಂಬುದೇ ನಿಮ್ಮ ಆಡಳಿತ ಎಷ್ಟು ಕುಸಿದಿದೆ ಎಂದು ಹೇಳುತ್ತಿದೆ ಎಂದು ಜೆಡಿಎಸ್ ಪಕ್ಷವು ಬಿಜೆಪಿ ಸರ್ಕಾರದ ಆಡಳಿತದ ವೈಫಲ್ಯವನ್ನು ಟ್ವೀಟ್ ಮೂಲಕ ರಾಜ್ಯದ ಜನರ ಮುಂದಿಟ್ಟಿದೆ.
ಈ ಸ್ಯಾಂಟ್ರೋ ರವಿಗೆ ಕುಮಾರಕೃಪ ಅತಿಥಿ ಗೃಹದಲ್ಲಿ ತಿಂಗಳುಗಳ ಕಾಲ ವಾಸವಿರುವ ವ್ಯವಸ್ಥೆ ಕಲ್ಪಿಸಿದ್ದು ಯಾರು? ಮುಖ್ಯಮಂತ್ರಿ @BSBommai ಮನೆಯಿಂದ ಕೂಗಳತೆಯಲ್ಲಿ ಇದು ನಡೆದಿದೆ ಎಂಬುದೇ ನಿಮ್ಮ ಆಡಳಿತ ಎಷ್ಟು ಕುಸಿದಿದೆ ಎಂದು ಹೇಳುತ್ತಿದೆ.
2/6— Janata Dal Secular (@JanataDal_S) January 7, 2023
“>
ಸ್ಯಾಂಟ್ರೋ ರವಿಯೊಂದಿಗೆ ನಿಮ್ಮ ಸಚಿವರಿಗಿರುವ ಸಂಬಂಧವೇನು? ಉನ್ನತ ಪೊಲೀಸ್ ಅಧಿಕಾರಿಗಳನ್ನು ಏಕವಚನದಲ್ಲಿ ಮಾತನಾಡಿಸಿ, ವರ್ಗಾವಣೆ ಕೆಲಸ ಮಾಡಿಸುತ್ತೇನೆ ಎನ್ನುವ ಈ ಡೀಲ್ ಗಿರಾಕಿಯ ವ್ಯವಹಾರಕ್ಕೆ ಸಾಥ್ ನೀಡಿದವರು ಯಾರು? ಎಂದು ಜೆಡಿಎಸ್ ಪ್ರಶ್ನಿಸಿದೆ.
ಸ್ಯಾಂಟ್ರೊ ರವಿಯ ಆಡಿಯೊಗಳು, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಪರಿಚಯವೇ ಇಲ್ಲವೆಂದ ಮೇಲೆ ಆತನಿಗೆ ಇಡೀ ರಾಜ್ಯ ಸರ್ಕಾರ ತನ್ನ ಜೇಬಲ್ಲಿದೆ ಎಂದು ಮಾತನಾಡುವ ಅಧಿಕಾರ ಕೊಟ್ಟವರು ಯಾರು? ಕಮಿಷನ್ ದಂಧೆಗಾಗಿ ಇಂತಹ ಎಷ್ಟು ಅಯೋಗ್ಯರನ್ನು ಸಾಕುತ್ತಾ ಇದ್ದೀರಿ? ಎಂದು ಬಿಜೆಪಿ ಸರ್ಕಾರವನ್ನು ಪ್ರಶ್ನಿಸಿದೆ.
ಸತ್ಯದ ತಲೆ ಮೇಲೆ ಹೊಡೆದು ಹಸಿಸುಳ್ಳು ಹೇಳುವವರು ನೀವು. ಜನಹಿತಕ್ಕಾಗಿ ಕೆಲಸ ಮಾಡಬೇಕಿದ್ದ ಸರ್ಕಾರ, ಆಡಳಿತವನ್ನು ದಂಧೆ ಮಾಡಿಕೊಂಡಿದೆ. ಕುಮಾರಕೃಪ ಅತಿಥಿ ಗೃಹವನ್ನು ಜೂಜಿನ ಅಡ್ಡೆಯಂತೆ ಬಳಸುತ್ತಿದ್ದೀರಿ. ಎಚ್.ಡಿ.ಕುಮಾರಸ್ವಾಮಿ ಅವರು ಬಿಡುಗಡೆ ಮಾಡಿದ ಒಂದು ವಿಡಿಯೋದಿಂದಾಗಿ ಇಂಗು ತಿಂದ ಮಂಗನಂತೆ ತಡಬಡಾಯಿಸುತ್ತಿರುವ ಬಿಜೆಪಿಯವರೆ, ನಿಮ್ಮ ಬುಡ ಅಲುಗಾಡುತ್ತಿದೆ. 2023ರ ಚುನಾವಣೆಯಲ್ಲಿ ನೀವು ಕುಸಿದು ಹೋಗುವುದು ಖಂಡಿತ ಎಂದು ಜೆಡಿಎಸ್ ಕಾಲೆಳೆದಿದೆ.