Thursday, September 19, 2024

ಪ್ರಾಯೋಗಿಕ ಆವೃತ್ತಿ

ಆಸ್ಕರ್ ಪ್ರಶಸ್ತಿಗೆ ಕಾಂತಾರ ನಾಮನಿರ್ದೇಶನ

ವಿಶ್ವದಲ್ಲೆ ಸಿನಿಮಾ ಕ್ಷೇತ್ರದ ಅತ್ಯುನ್ನತ ಪ್ರಶಸ್ತಿಯಾದ ಆಸ್ಕರ್ ಗೆ ಕನ್ನಡದ ಕಾಂತಾರ ಸಿನಿಮಾ ನಾಮ ನಿರ್ದೇಶನಗೊಂಡಿದ್ದು, ಭಾರತೀಯ ಚಿತ್ರರಂಗದಲ್ಲಿ ದೊಡ್ಡ ಸಂಚಲನ ಸೃಷ್ಠಿಸಿದೆ. ಈ ಚಿತ್ರವನ್ನು ರಿಷಬ್ ಶೆಟ್ಟಿ ನಿರ್ದೇಶಿಸಿ, ನಾಯಕ ನಟನಾಗಿ ಅಭಿನಯಿಸಿದ್ದರು.

“>

ಕಾಂತಾರವು ‘ಅತ್ಯುನ್ನತ ಚಿತ್ರ’ ಹಾಗೂ ‘ಅತ್ಯುನ್ನತ ನಿರ್ದೇಶನ’ ವಿಭಾಗದಲ್ಲಿ ಆಸ್ಕರ್ ಗೆ ನಾಮನಿರ್ದೇಶನಗೊಂಡಿದೆ ಎಂದು ಕಾಂತಾರ ಚಿತ್ರ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲ್ಮ್ಸ್ ಈ ಸಂಭ್ರಮವನ್ನು ಟ್ವೀಟ್ ನಲ್ಲಿ ಹಂಚಿಕೊಂಡಿದೆ.

ಕಾಂತಾರಕ್ಕೆ 2 ವಿಭಾಗಗಳಲ್ಲಿ ಆಸ್ಕರ್ ಗೆ ಅರ್ಹತೆ ಪಡೆದಿದೆ ಎಂದು ಹಂಚಿಕೊಳ್ಳಲು ನಮಗೆ ಅತೀವ ಸಂತಸವಾಗುತ್ತಿದೆ!. ನಮ್ಮನ್ನು ಬೆಂಬಲಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ನಿಮ್ಮೆಲ್ಲರ ಬೆಂಬಲದೊಂದಿಗೆ ಈ ಪ್ರಯಾಣವನ್ನು ಹಂಚಿಕೊಳ್ಳಲು ನಾವು ಎದುರು ನೋಡುತ್ತಿದ್ದೇವೆ  ಎಂದು ಹೊಂಬಾಳೆ ಫಲ್ಮ್ಸ್ ತಿಳಿಸಿದೆ.

ಈ ಹಿಂದೆ ರಾಜಮೌಳಿ ನಿರ್ದೇಶನದ ಆರ್ ಆರ್ ಆರ್ ಸಿನಿಮಾ ಆಸ್ಕರ್ ಗೆ ನಾಮನಿರ್ದೇಶನಗೊಂಡಿತ್ತು, ಈಗ ಕನ್ನಡ ಸಿನಿಮಾವೊಂದು ಆಸ್ಕರ್ ಅಂಗಳಕ್ಕೆ ತಲುಪಿದ್ದು, ನಿರೀಕ್ಷೆಯನ್ನು ಹೆಚ್ಚು ಮಾಡಿದೆ.

Related Articles

LEAVE A REPLY

Please enter your comment!
Please enter your name here

ಅತ್ಯಂತ ಜನಪ್ರಿಯ

error: Content is protected !!