ಮಂಡ್ಯ ನಗರದ ಜಿ.ಪಂ ಕಚೇರಿ ಬಳಿ ಇರುವ ಹಿಂದುಳಿದ ವರ್ಗಗಳ ಗ್ರೂಪ್ ಡಿ ನೌಕರರ ಸಂಘದ ವತಿಯಿಂದ 2023ರ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮವು ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು.
ಈ ಕಾರ್ಯಕ್ರಮಕ್ಕೆ ಜಿಲ್ಲಾ ಹಿಂದುಳಿದ ವರ್ಗಗಳ ಅಧಿಕಾರಿ ಶ್ರೀನಿವಾಸ್ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ, ಇಲಾಖೆಯಲ್ಲಿ ಗ್ರೂಪ್ ಡಿ ನೌಕರರೇ ಆಧಾರ ಸ್ಥಂಭ ಆಗಾಗಿ ಅವರಿಗೆ ಹೆಚ್ಚಿನ ಸವಲತ್ತು ಕೊಡಬೇಕು ಎಂದರು. ವಿದ್ಯಾರ್ಥಿ ನಿಲಯದ ವಿದ್ಯಾರ್ಥಿಗಳಿಗೆ ಶುಚಿಯಾಗಿ ರುಚಿಯಾಗಿ ಆಹಾರವನ್ನು ನೀಡುವುದು ನಿಮ್ಮ ಜವಾಬ್ದಾರಿ ಎಂದು ನೌಕರರಿಗೆ ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಕಚೇರಿಯ ವ್ಯವಸ್ಥಾಪಕರಾದ ರೇಖಾ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಹರೀಶ್ , ಜಿಲ್ಲಾ ಕಚೇರಿಯ ಲೆಕ್ಕಾಧಿಕಾರಿಗಳು, ತಾಲೂಕು ಕಚೇರಿಯ ಸಿಬ್ಬಂದಿಗಳು, ಎಲ್ಲಾ ನಿಲಯ ಮೇಲ್ವಿಚಾರಕರುಗಳು ಗ್ರೂಪ್ ಡಿ ನೌಕರರಿಗೆ ಶುಭಕೋರಿದರು.
ಕಾರ್ಯಕ್ರಮದಲ್ಲಿ ಅಧ್ಯಕ್ಷ ಕೆ ಬಿ ಕೃಷ್ಣ, ಖಜಾಂಚಿ ಎಚ್ ಎನ್ ನಾಗರಾಜು, ನಿಕಟಪೂರ್ವ ಅಧ್ಯಕ್ಷ ಎಸ್ ಎಲ್ ರಾಜಶೇಖರ್ ಹಾಗೂ ಎಲ್ಲಾ ಪದಾಧಿಕಾರಿಗಳು ನೌಕರರು ಸೇರಿದಂತೆ ಇನ್ನಿತರರು ಹಾಜರಿದ್ದರು.