ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನಲ್ಲಿ ಜಾನುವಾರುಗಳಿಗೆ ಚರ್ಮಗಂಟು ರೋಗವು (Lumpy Skin Disease) ಕಾಣಿಸಿಕೊಂಡಿದ್ದು, ರೋಗವು ವ್ಯಾಪಕವಾಗಿ ಹರಡುವ ಸಾಧ್ಯತೆ ಹೆಚ್ಚಾಗಿರುವುದರಿಂದ ಮಂಡ್ಯ ಜಿಲ್ಲಾದ್ಯಂತ ಎಲ್ಲಾ ಜಾನುವಾರು ಜಾತ್ರೆಗಳನ್ನು ನಿಷೇಧಿಸಿ ಜಿಲ್ಲಾಧಿಕಾರಿ ಹೆಚ್.ಎನ್.ಗೋಪಾಲಕೃಷ್ಣ ಆದೇಶ ಹೊರಡಿಸಿದ್ದಾರೆ.
ಚರ್ಮಗಂಟು ರೋಗ ಹರಡುವಿಕೆ ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ಲಸಿಕ ಹಾಕುವ ಕಾರ್ಯ ಪ್ರಗತಿಯಲ್ಲಿದೆ. ಈ ರೋಗ ಹರಡುವುದನ್ನು ತಡೆಗಟ್ಟಲು ಜಿಲ್ಲೆಯಾದ್ಯಂತ ಜಾನುವಾರು ಸಂತೆ ಮತ್ತು ಸಾಗಾಣಿಕೆ ಮಾಡುವುದನ್ನು ಸಂಪೂರ್ಣವಾಗಿ ಜಿಲ್ಲೆಯಾದ್ಯಂತ ನಿಷೇಧ ಹೇರಲಾಗಿದೆ.
ಮಂಡ್ಯ ಜಿಲ್ಲೆಯಲ್ಲಿ ಜಾನುವಾರುಗಳಲ್ಲಿ ಚರ್ಮಗಂಟು ರೋಗ ಉಲ್ಬಣವಾಗಬಹುದಾಗಿದ್ದು, ಈ ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗೃತ ಕ್ರಮವಾಗಿ ರೋಗವು ಹತೋಟಿಗೆ ಬರುವವರೆಗೆ ಈ ನಿಷೇಧ ಜಾರಿಯಲ್ಲಿರುತ್ತದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.