ಯುವಕರಿಗೆ ಪಕೋಡಾ ಮಾರುವ ಸಲಹೆ ನೀಡಿದ ನರೇಂದ್ರ ಮೋದಿ ಅವರೇ, ಯುವಜನೋತ್ಸವ ಎಂದರೆ ಸಿನೆಮಾ ತಾರೆಯರನ್ನು ಕರೆಸಿ ಹಾಡು, ಡ್ಯಾನ್ಸುಗಳ ಕಾರ್ಯಕ್ರಮ ಮಾಡುವುದಲ್ಲ. ರಾಜ್ಯದಲ್ಲಿ 1500ಕ್ಕೂ ಹೆಚ್ಚು ಯುವಜನರು ನಿರುದ್ಯೋಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ಯುವಜನರ ಈ ಸಾವು ಹಾಗೂ ನೋವಿನ ಬಗ್ಗೆ ತಾವು ಮೌನ ಮುರಿಯುವಿರಾ? ಎಂದು ಧಾರಾವಾಡದಲ್ಲಿ ಬಿಜೆಪಿ ಸರ್ಕಾರ ನಡೆಸುತ್ತಿರುವ ಯುವಜನೋತ್ಸವದ ಬಗ್ಗೆ ಕಾಂಗ್ರೆಸ್ ಪಕ್ಷ ಟೀಕಿಸಿದೆ.
ಯುವಕರಿಗೆ ಪಕೋಡಾ ಮಾರುವ ಸಲಹೆ ನೀಡಿದ @narendramodi ಅವರೇ,
ಯುವಜನೋತ್ಸವ ಎಂದರೆ ಸಿನೆಮಾ ತಾರೆಯರನ್ನು ಕರೆಸಿ ಹಾಡು, ಡ್ಯಾನ್ಸುಗಳ ಕಾರ್ಯಕ್ರಮ ಮಾಡುವುದಲ್ಲ.ರಾಜ್ಯದಲ್ಲಿ 1500ಕ್ಕೂ ಹೆಚ್ಚು ಯುವಜನರು ನಿರುದ್ಯೋಗದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ,
ಯುವಜನರ ಈ ಸಾವು ಹಾಗೂ ನೋವಿನ ಬಗ್ಗೆ ತಾವು ಮೌನ ಮುರಿಯುವಿರಾ?#ModiMouna
— Karnataka Congress (@INCKarnataka) January 12, 2023
“>
ಯುವಜನರ ಭವಿಷ್ಯವನ್ನು ಸಮಾಧಿ ಮಾಡಿದ ಬಿಜೆಪಿ ಸರ್ಕಾರ, ಈಗ ಆ ಸಮಾಧಿ ಮೇಲೆ ಉತ್ಸವ ಮಾಡುತ್ತಿದೆ. ಯುವಜನರ ಉದ್ಯೋಗ ಮಾರಾಟ, ಶಿಷ್ಯವೇತನ ನೀಡದೆ ಯುವಜನರ ಶಿಕ್ಷಣಕ್ಕೆ ದ್ರೋಹ, KPSC, KEA, KSP ಅಭ್ಯರ್ಥಿಗಳಿಗೆ ವಂಚನೆ ಮಾಡಿದ ನರೇಂದ್ರಮೋದಿ ಅವರು ಉದ್ಘಾಟಿಸುವುದು ಉತ್ಸವವನ್ನಲ್ಲ, ಯುವಕರ ಭವಿಷ್ಯಕ್ಕೆ ಬಿಜೆಪಿ ತೋಡಿದ ಸಮಾಧಿಯನ್ನ ಎಂದು ಕಾಂಗ್ರೆಸ್ ಕಾಲೆಳೆದಿದೆ.