ನಾಗಮಂಗಲ ತಾಲೂಕಿನ ಬೆಳ್ಳೂರಿನಲ್ಲಿರುವ ಶ್ರೀಕಾಳಿಕಾಂಬ ಕಮಟೇಶ್ವರ ಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ ಮೂಲಕ ಆರ್ಥಿಕ ಸಹಾಯ ಮಾಡಲಾಯಿತು.
ನಾಗಮಂಗಲ ತಾಲೂಕಿನ ಶ್ರೀಧರ್ಮಸ್ಥಳ ಯೋಜನಾಧಿಕಾರಿ ದಿವಾಕರ್ ಮಾತನಾಡಿ, ಶ್ರೀಧರ್ಮಸ್ಥಳ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದದೊಂದಿಗೆ ನಾವಿಲ್ಲಿಗೆ ಬಂದು ದೇವಾಲಯಕ್ಕೆ ಆರ್ಥಿಕ ಸಹಾಯ ಮಾಡಿದ್ದೇವೆ, ಹಲವು ದೇವಾಲಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಧರ್ಮಸ್ಥಳ ಸಂಘವು ನಿರಂತರವಾಗಿ ಶ್ರಮಿಸುತ್ತಿದೆ. ಗ್ರಾಮದ ದೇವಾಲಯಕ್ಕೆ ನೀಡಿರುವ ಸಹಾಯಧನವನ್ನು ಸರಿಯಾಗಿ ಬಳಕೆ ಮಾಡಿಕೊಳ್ಳಬೇಕು
ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ಒಂದು ಲಕ್ಷ ರೂ. ಮೊತ್ತದ ಚೆಕ್ ಅನ್ನು ದೇವಸ್ಥಾನ ಟ್ರಸ್ಟ್ ಅಧ್ಯಕ್ಷ ದಿವಾಕರ್ ಮೂರ್ತಿ ಅವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಬೆಳ್ಳೂರು ವಲಯದ ಮೇಲ್ವಿಚಾರಕರು ಹಾಗೂ ಸೇವಾ ಪ್ರತಿನಿಧಿ ಜಯಂತ ಕಾರ್ಯದರ್ಶಿ ಕೆ. ಪ್ರಕಾಶ್ ಖಜಾಂಚಿ ಎಸ್.ಕುಮಾರ್ ಊರಿನ ಗ್ರಾಮಸ್ಥರು ಇನ್ನು ಮುಂತಾದವವರು ಪಾಲ್ಗೊಂಡಿದ್ದರು.