ಮಂಡ್ಯ ತಾಲ್ಲೂಕಿನ ಹಳವಾಡಿ, ತಗ್ಗಹಳ್ಳಿ, ಪುರ ಹಾಗೂ ಚೀರನಹಳ್ಳಿ ಮಾರ್ಗಕ್ಕೆ ಹೆಚ್ಚುವರಿ ಕೆಎಸ್ಆರ್ಟಿಸಿ ಬಸ್ ಗಳನ್ನು ನಿಯೋಜಿಸಲು ಆಗ್ರಹಿಸಿ ನೂರಾರು ವಿದ್ಯಾರ್ಥಿಗಳು ಗುರುವಾರ ಮಂಡ್ಯ ನಗರದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.
ಈ ಮಾರ್ಗದಲ್ಲಿ ಕೇವಲ ಎರಡು ಬಸ್ಸುಗಳು ಮಾತ್ರ ಸಂಚರಿಸುತ್ತಿದೆ, ಅವು ಕೂಡ ಬೆಳಿಗ್ಗೆ ಮತ್ತು ಸಂಜೆ ವೇಳೆಯಲ್ಲಿ ಮಾತ್ರ ಸಂಚಾರ ಮಾಡುತ್ತದೆ, ಆದರೆ ಕಾಲೇಜಿಗೆ ಹೊರಡುವ ಸಂದರ್ಭದಲ್ಲಿ ಅವುಗಳಲ್ಲಿ ಹೆಚ್ಚಿನ ಜನಸಂದಣಿ ಇರುವುದರಿಂದ ಎಲ್ಲಾ ವಿದ್ಯಾರ್ಥಿಗಳು ಹತ್ತಿಕೊಳ್ಳಲು ಆಗುವುದಿಲ್ಲ, ಆದ್ದರಿಂದ ಸರಿಯಾದ ಸಮಯಕ್ಕೆ ಕಾಲೇಜಿಗೆ ತಲುಪಲು ಆಗುತ್ತಿಲ್ಲ, ಆದ್ದರಿಂದ ಶಾಲಾ-ಕಾಲೇಜು ಅವದಿಯಲ್ಲಿ ಹೆಚ್ಚಿನ ಬಸ್ ಗಳನ್ನು ನಿಯೋಜನೆ ಮಾಡಬೇಕೆಂದು ಆಗ್ರಹಿಸಿ ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.
ವಿದ್ಯಾರ್ಥಿಗಳ ಮನವಿ ಸಲ್ಲಿಸಿದ ಅಧಿಕಾರಿಗಳು ಅವರ ಮನವಿಯನ್ನು ಆಲಿಸಿ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಪ್ರತಿಭಟನೆಯಲ್ಲಿ ವಿದ್ಯಾರ್ಥಿನಿಯರಾದ ದೇವಿಕಾ, ಸಿಂಧೂ, ಸಿಂಚನಾ, ಸ್ನೇಹ, ಸೋನಾ, ಸೌಮ್ಯ ಮತ್ತಿತರರು ಭಾಗವಹಿಸಿದ್ದರು.